ಎಚ್ಚರ : ಇಂದು ನಿಮಗೆ ಸಿಗುವುದಿಲ್ಲ ಖಾಸಗಿ ಆಸ್ಪತ್ರೆ ವೈದ್ಯರು

Published : Jul 28, 2018, 08:11 AM IST
ಎಚ್ಚರ : ಇಂದು ನಿಮಗೆ ಸಿಗುವುದಿಲ್ಲ ಖಾಸಗಿ ಆಸ್ಪತ್ರೆ ವೈದ್ಯರು

ಸಾರಾಂಶ

ಕೇಂದ್ರ ಸರ್ಕಾರವು ಸಂಸತ್‌ನಲ್ಲಿ ಮಂಡಿಸಲು ಮುಂದಾಗಿರುವ ಭಾರತೀಯ ವೈದ್ಯಕೀಯ ಪರಿಷತ್‌ನ ತಿದ್ದುಪಡಿ ವಿಧೇಯಕ  ವಿರೋಧಿಸಿ ಖಾಸಗಿ ವೈದ್ಯರು ಇಂದು ದೇಶಾದ್ಯಂತ ಹೊರ ರೋಗಿ ಸೇವೆ (ಒಪಿಡಿ) ಬಹಿಷ್ಕರಿಸಿ ಮುಷ್ಕರ ನಡೆಸುತ್ತಿದ್ದಾರೆ. ಪರಿಣಾಮ ಇಂದು ಬಹುತೇಕ ಖಾಸಗಿ ಆಸ್ಪತ್ರೆಗಳಲ್ಲಿ ಒಪಿಡಿ ಸೇವೆ ಲಭ್ಯವಿರುವುದಿಲ್ಲ.  

ಬೆಂಗಳೂರು: ಕೇಂದ್ರ ಸರ್ಕಾರವು ಸಂಸತ್‌ನಲ್ಲಿ ಮಂಡಿಸಲು ಮುಂದಾಗಿರುವ ಭಾರತೀಯ ವೈದ್ಯಕೀಯ ಪರಿಷತ್‌ನ ತಿದ್ದುಪಡಿ ವಿಧೇಯಕ  ವಿರೋಧಿಸಿ ಖಾಸಗಿ ವೈದ್ಯರು ಇಂದು ದೇಶಾದ್ಯಂತ ಹೊರ ರೋಗಿ ಸೇವೆ (ಒಪಿಡಿ) ಬಹಿಷ್ಕರಿಸಿ ಮುಷ್ಕರ ನಡೆಸುತ್ತಿದ್ದಾರೆ. ಪರಿಣಾಮ ಇಂದು ಬಹುತೇಕ ಖಾಸಗಿ ಆಸ್ಪತ್ರೆಗಳಲ್ಲಿ ಒಪಿಡಿ ಸೇವೆ ಲಭ್ಯವಿರುವುದಿಲ್ಲ.

 ಹೀಗಾಗಿ ಇಂದು ಹೊರ ರೋಗಿ ಸೇವೆ ಪಡೆ ಯಬೇಕಾದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಪಡೆಯಬಹುದು. ಖಾಸಗಿ ಆಸ್ಪತ್ರೆಗಳ ಮುಷ್ಕರದಿಂದಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚಾಗಲಿರುವ ರೋಗಿಗಳಿಗೆ ಸೂಕ್ತ ಆರೋಗ್ಯ ಸೇವೆ ನೀಡಲು ಆರೋಗ್ಯ ಇಲಾಖೆಯು ವೈದ್ಯಾಧಿಕಾರಿಗಳಿಗೆ ಆದೇಶ ಮಾಡಿದೆ. 

ವಿರೋಧ ಏಕೆ?: ಕೇಂದ್ರ ಸರ್ಕಾರವು ಭಾರತೀಯ ವೈದ್ಯಕೀಯ ಪರಿಷತ್ ಕಾಯ್ದೆಗೆ ಕೆಲ ತಿದ್ದುಪಡಿ ತರಲು 2016 ರಲ್ಲಿ ತಿದ್ದುಪಡಿ ವಿಧೇಯಕ ಮಂಡಿಸಿತ್ತು.  ಈ ವೇಳೆ ಅವೈಜ್ಞಾನಿಕವಾಗಿ ತಿದ್ದುಪಡಿ ಮಾಡಲಾ ಗುತ್ತಿದ್ದು, ತಿದ್ದುಪಡಿಯಿಂದ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಬಡ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಮರೀಚಿಕೆಯಾಗಲಿದೆ.

ವೈದ್ಯಕೀಯ ಶಿಕ್ಷಣದಲ್ಲಿ ರಾಜ್ಯಗಳು ಅಧಿಕಾರ ಕಳೆದುಕೊಳ್ಳಲಿವೆ. ಹೀಗಾಗಿ ಮರು ಪರಿಶೀಲಿಸುವಂತೆ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಒತ್ತಾಯಿಸಿತ್ತು. ಆದರೂ, ಯಾವುದೇ ಪರಿಷ್ಕರಣೆ ಇಲ್ಲದೆ ಕೇಂದ್ರ ಸರ್ಕಾರವು ಸಂಸತ್‌ನಲ್ಲಿ ವಿಧೇಯಕ ಮಂಡನೆಗೆ ಸಿದ್ಧತೆ ನಡೆಸಿದೆ. ಹೀಗಾಗಿ ಐಎಂಎ ದೇಶಾದ್ಯಂತ ಶನಿವಾರ ಒಂದು ದಿನ ಹೊರ ರೋಗಿ ಸೇವೆ ಬಂದ್ ಮಾಡುವಂತೆ ಕರೆ ನೀಡಿದರು. 

ಈ ಹಿನ್ನೆಲೆಯಲ್ಲಿ ಐಎಂಎ ರಾಜ್ಯಾಧ್ಯಕ್ಷ  ಡಾ.ಎಚ್.ಎನ್. ರವೀಂದ್ರ, ರಾಜ್ಯದಲ್ಲಿ ಎಲ್ಲಾಖಾಸಗಿ ಆಸ್ಪತ್ರೆಗಳಲ್ಲೂ ಶನಿವಾರ ಒಂದು ದಿನ  ಹೊರ ರೋಗಿ ಸೇವೆ ಲಭ್ಯವಿರುವುದಿಲ್ಲ. ಆದರೆ, ತುರ್ತು ಸೇವೆ ಹಾಗೂ ಒಳರೋಗಿ ಸೇವೆಗೆ ವ್ಯತ್ಯಯ ಇರುವುದಿಲ್ಲ ಎಂದಿದ್ದಾರೆ. ದೇಶಾದ್ಯಂತ 2.5 ಲಕ್ಷ ಮಂದಿ ವೈದ್ಯರು ಐಎಂಎ ಸದ್ಯರಾಗಿದ್ದಾರೆ. ರಾಜ್ಯದಲ್ಲಿ 27 ಸಾವಿರ ಮಂದಿ ಸದಸ್ಯರಿದ್ದು, ಅಷ್ಟೂ ಮಂದಿ ಬೆಂಬಲ ವ್ಯಕ್ತಪಡಿಸಲಿದ್ದಾರೆ. ಹೀಗಾಗಿ ಬಹುತೇಕ ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್‌ಗಳಲ್ಲಿ ಹೊರ ರೋಗಿ ಸೇವೆ ಇರುವುದಿಲ್ಲ ಎಂದು ಹೇಳಿದ್ದಾರೆ.

ಕೆಲ ಖಾಸಗಿ ಒಪಿಡಿ ಓಪನ್: ಇನ್ನು ನಗರದ ಕೆಲ ಆಸ್ಪತ್ರೆಗಳು ಮುಷ್ಕರ ಕುರಿತು ಯಾವುದೇ ಮಾಹಿತಿ ಇಲ್ಲದ ಕಾರಣ ಒಪಿಡಿ ಬಂದ್ ಮಾಡುತ್ತಿಲ್ಲ ಎಂದು ಕೆಲ ಖಾಸಗಿ ಆಸ್ಪತ್ರೆಗಳು ಹೇಳಿವೆ. ಹೀಗಾಗಿ ಕೆಲ ಆಸ್ಪತ್ರೆಗಳಲ್ಲಿ ಸೇವೆ ಎಂದಿನಿಂತೆ ಮುಂದು ವರಿಯಲಿದೆ. ಖಾಸಗಿ ವೈದ್ಯರ ಪ್ರತಿಭಟನೆ ಒಪಿಡಿಗೆ ಮಾತ್ರ ಸೀಮಿತ ಇದ್ದರೂ, ಕೆಲವೆಡೆ ತುರ್ತು ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆಯ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇದನ್ನು ಗಮನಿಸಿ ರೋಗಿಗಳು ಅಲ್ಲಿಗೆ ತೆರಳುವ ಮುನ್ನ ದೂರವಾಣಿ ಕರೆ ಮಾಡಿ ಆಸ್ಪತ್ರೆ ತೆರೆದಿರುವುದನ್ನು ಖಚಿತ ಪಡಿಸಿಕೊಂಡು ದುವರಿಯಬಹುದು.

ತುರ್ತು ಪ್ರಕರಣಗಳಿದ್ದಲ್ಲಿ ಸಮೀಪದ ಸರಕಾರಿ ಅಥವಾ ಪಾಲಿಕೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯ ಬಹುದು. ಕ್ಷ-ಕಿರಣ ಸಹಿತ ಲ್ಯಾಬ್ ಟೆಸ್ಟ್‌ಗೆ ಸಮಯ ನಿಗದಿ ಆಗಿದ್ದಲ್ಲಿ ಮೊದಲೇ ಖಾತರಿ ಪಡಿಸಿಕೊಳ್ಳುವುದು ಉತ್ತಮ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Sharath R Ashok scuba diving: ಸಮುದ್ರದಾಳದಲ್ಲಿ ಆರ್ ಅಶೋಕ್ ಪುತ್ರನ ಗಿನ್ನೆಸ್ ಸಾಹಸ
ಬಾಗಲಕೋಟೆ ಉಪಚುನಾವಣೆ ಮತ ಎಣಿಕೆ: ಬಿಗಿ ಭದ್ರತೆಯೊಂದಿಗೆ ಸ್ಟ್ರಾಂಗ್ ರೂಮ್ ಓಪನ್ ಮಾಡಿದ ಅಧಿಕಾರಿಗಳು