
ಬೆಂಗಳೂರು(ಜ.23): ಜನವರಿ 25 ರಂದು ಮಹದಾಯಿ ಹೋರಾಟ ಬೆಂಬಲಿಸಿ ಕೇಂದ್ರ ಸರ್ಕಾರದ ಗಮನಹರಿಸಿವುದಕ್ಕಾಗಿ ಕನ್ನಡಪರ ಸಂಘಟನೆಗಳು ಹಮ್ಮಿಕೊಂಡಿರುವ ಕರ್ನಾಟಕ ಬಂದ್' ದಿನದಂದು ಖಾಸಗಿ ಶಾಲೆಗಳಿಗೆ ರಜೆ ನೀಡಲು ಒಕ್ಕೂಟ ನಿರ್ಧರಿಸಿದೆ.
ಈ ಬಗ್ಗೆ ಕರ್ನಾಟಕ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲೆಗಳ ಆಡಳಿತ ಒಕ್ಕೂಟದ ಪ್ರಧಾನ ಕಾರ್ಯದರ್ಶಿಗಳಾದ ಡಿ. ಶಶಿಕುಮಾರ್ ತಿಳಿಸಿದ್ದಾರೆ.
ಸುರಕ್ಷಿತ ಹಾಗೂ ಭದ್ರತೆಯ ಉದ್ದೇಶದಿಂದ ಬಂದ್ ದಿನದಂದು ಶಾಲೆಗಳಿಗೆ ರಜೆ ನೀಡಲಿದ್ದು, ಶನಿವಾರ ಪೂರ್ತಿ ತರಗತಿ ನಡೆಸುವುದರ ಮೂಲಕ ಬಂದ್'ನಿಂದಾದ ಶೈಕ್ಷಣಿಕ ನಷ್ಟವನ್ನು ಭರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.