
ನವದೆಹಲಿ(ಆ.15): ಸತತ ಸೋಲುಗಳಿಂದ ಹೈರಾಣಾಗಿರುವ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲು ತಮ್ಮ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷೆಯನ್ನಾಗಿ ನೇಮಕ ಮಾಡುವ ಸುಳಿವನ್ನು ಪಕ್ಷಾಧ್ಯಕ್ಷೆ ಸೋನಿಯಾ ಗಾಂಧಿ ಬಿಟ್ಟುಕೊಟ್ಟಿದ್ದಾರೆ ಎಂಬ ಸುದ್ದಿಯೊಂದು ಸಂಚಲನಕ್ಕೆ ಕಾರಣವಾಗಿದೆ.
ಆ.8ರಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯ ಅಂತ್ಯದಲ್ಲಿ ಹಿರಿಯ ನಾಯಕರ ಮುಂದೆ ಇಂತಹ ಸುಳಿವೊಂದನ್ನು ಸೋನಿಯಾ ನೀಡಿದ್ದಾರೆ ಎಂದು ಆಂಗ್ಲ ದೈನಿಕವೊಂದು ವರದಿ ಮಾಡಿದೆ. ಕಾಂಗ್ರೆಸ್ ಪಕ್ಷಕ್ಕೆ ಚೇತರಿಕೆಯ ಟಾನಿಕ್ ನೀಡಲು ಪ್ರಿಯಾಂಕಾ ಅವರನ್ನು ಸಕ್ರಿಯ ರಾಜಕಾರಣಕ್ಕೆ ಕರೆತರಬೇಕು ಎಂಬ ಕೂಗು ಆಗಾಗ್ಗೆ ಕೇಳಿ ಬರುತ್ತಲೇ ಇದೆ. ಇಂತಹ ಸಂದರ್ಭದಲ್ಲೇ ಈ ಸುದ್ದಿ ‘ಾರಿ ಸಂಚಲನಕ್ಕೆ ಕಾರಣವಾಗಿದೆ.
ಆದರೆ ಇದೊಂದು ಸುಳ್ಳು ಸುದ್ದಿಯ ಕುಚೋದ್ಯ ಪ್ರಕರಣ. ಅನಗತ್ಯ ಊಹಾಪೋಹ. ಸಂಪೂರ್ಣ ಸುಳ್ಳು ಹಾಗೂ ಆಧಾರರಹಿತ ಎಂದು ಕಾಂಗ್ರೆಸ್ ಮಾಧ್ಯಮ ವಿಭಾಗದ ಮುಖ್ಯಸ್ಥ ರಣದೀಪ್ ಸುರ್ಜೇವಾಲಾ ಹೇಳಿಕೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.