
ಸಿಂಗಾಪುರ: ತಮ್ಮ ತಂದೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರನ್ನು ತಾವು ಹಾಗೂ ತಮ್ಮ ಸಹೋದರಿ ಪ್ರಿಯಾಂಕ ಗಾಂಧಿ ಕ್ಷಮಿಸಿದ್ದಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ತಂದೆಯ ಹತ್ಯೆಗೆ ಕಾರಣ ಏನೇ ಇರಲಿ. ನಾವು ಯಾವುದೇ ಹಿಂಸೆಯನ್ನೂ ಕೂಡ ನಾವು ಸಮರ್ಥಿಸುವುದಿಲ್ಲ ಎಂದು ರಾಹುಲ್ ಹೇಳಿಕೆ ನೀಡಿದ್ದಾರೆ. ಸಿಂಗಾಪುರದಲ್ಲಿ ನಡೆದ ವಿದ್ಯಾರ್ಥಿಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ರಾಹುಲ್ ಈ ಹೇಳಿಕೆ ನೀಡಿದ್ದಾರೆ.
ತಮ್ಮ ತಂದೆ ಹಾಗೂ ತಮ್ಮ ಅಜ್ಜಿ ಇಬ್ಬರೂ ಕೂಡ ರಾಜಕೀಯದಲ್ಲಿರುವಾಗಲೇ ನಿಧನರಾದರು. ಈ ಘಟನೆಯಿಂದ ನಮಗೆ ಹೆಚ್ಚಿನ ನೋವುಂಟಾಗಿತ್ತು. ಆದರೆ ಇದೀಗ ಸಂಪೂರ್ಣವಾಗಿ ಕ್ಷಮಿಸಿದ್ದೇವೆ ಎಂದು ರಾಹುಲ್ ಹೇಳಿಕೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.