ಭಯೋತ್ಪಾದಕ ದಾಳಿ: ಪತ್ರಿಕಾಗೋಷ್ಠಿ ರದ್ದುಗೊಳಿಸಿದ ಪ್ರಿಯಾಂಕಾ!

By Web DeskFirst Published Feb 14, 2019, 8:53 PM IST
Highlights

ಯೋಧರ ಸಾವಿಗೆ ಮಮ್ಮಲ ಮರುಗುತ್ತಿದೆ ದೇಶ| ಪತ್ರಿಕಾಗೋಷ್ಠಿ ರದ್ದುಗೊಳಿಸಿದ ಪ್ರಿಯಾಂಕಾ ಗಾಂಧಿ ವಾದ್ರಾ| ಲಕ್ನೋದಲ್ಲಿ ಕರೆಯಲಾಗಿದ್ದ ಪ್ರಿಯಾಂಕಾ ಪತ್ರಿಕಾಗೋಷ್ಠಿ ರದ್ದು| ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದ ಪ್ರಿಯಾಂಕಾ| ಕಾಂಗ್ರೆಸ್ ಮಾತ್ರವಲ್ಲ ಇಡೀ ದೇಶ ಹುಥಾತ್ಮ ಯೋಧರ ಕುಟುಂಬದ ಜೊತೆ ನಿಲ್ಲಲಿದೆ ಎಂದ ಕಾಂಗ್ರೆಸ್ ನಾಯಕಿ

ಲಕ್ನೋ(ಫೆ.14): ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಆತ್ಮಾಹುತಿ ದಾಳಿ ನಡೆಸುವ ಮೂಲಕ ಉಗ್ರರು ಅಟ್ಟಹಾಸ ಮೆರೆದಿದ್ದಾರೆ.

ಅವಂತಿಪುರ್-ಪುಲ್ವಾಮಾ ಮಾರ್ಗ ಮಧ್ಯೆ ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಸಿಆರ್ ಪಿಎಫ್ ವಾಹನದ ಮೇಲೆ ಆತ್ಮಾಹುತಿ ದಾಳಿ ನಡೆಸಿ 40 ಯೋಧರನ್ನು ಬಲಿ ಪಡೆಯಲಾಗಿದೆ.

ಕಳೆದೊಂದು ದಶಕದ ಅವಧಿಯಲ್ಲೇ ನಡೆದ ಭೀಕರ ದಾಳಿ ಇದಾಗಿದ್ದು, ಇಡೀ ದೇಶ ಆಕ್ರೋಶದ ಉರಿಯಲ್ಲಿ ಬೇಯುತ್ತಿದೆ. ಯೋಧರ ಸಾವಿಗೆ ಪ್ರತೀಕಾರಕ್ಕಾಗಿ ಇಡೀ ದೇಶ ಹಾತೊರೆಯುತ್ತಿದೆ.

ಈ ಮಧ್ಯೆ ಹುತಾತ್ಮ ಯೋಧರ ಪರ ನಿಂತ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ, ಲಕ್ನೋದಲ್ಲಿ ತಮ್ಮ ಸುದ್ದಿಗೋಷ್ಠಿ ರದ್ದು ಪಡಿಸಿ ಮೌನಾಚರಣೆ ಆಚರಿಸಿದ್ದಾರೆ. ‘ರಾಜಕೀಯ ಮಾತನಾಡಲು ಸುದ್ದಿಗೋಷ್ಟಿ ಕರೆದಿದ್ದೆ. ಆದರೆ ಇದು ರಾಜಕೀಯ ಮಾತನಾಡುವ ಸಮಯವಲ್ಲ. ಇಡೀ ದೇಶ ಹುತಾತ್ಮ ಯೋಧರ ಜೊತೆ ನಿಲ್ಲುವ ಸಮಯ. ಮೌನಾಚರಣೆ ಸಲ್ಲಿಸುವ ಮೂಲಕ ಹುತಾತ್ಮ ಯೋಧರ ಕುಟುಂಬಗಳಿಗೆ ಧೈರ್ಯ ತುಂಬೋಣ ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

Pulwama attack: Priyanka cancels press conference, holds 2-minute silence for jawans

Read story | https://t.co/9kjiWHGmvw pic.twitter.com/neOyxDpTDv

— ANI Digital (@ani_digital)

ಯೋಧರನ್ನು ಕೆಳದುಕೊಂಡ ಕುಟುಂಬಗಳ ನೋವು ನನಗೆ ಅರಿವಾಗುತ್ತದೆ ಎಂದ ಪ್ರಿಯಾಂಕಾ,  ಕಾಂಗ್ರೆಸ್ ಪಕ್ಷ ಮಾತ್ರವಲ್ಲ ಇಡೀ ದೇಶ ಇವರ ಜೊತೆ ನಿಲ್ಲಬೇಕು ಎಂದು ಮನವಿ ಮಾಡಿದರು.

click me!