ಭಯೋತ್ಪಾದಕ ದಾಳಿ: ಪತ್ರಿಕಾಗೋಷ್ಠಿ ರದ್ದುಗೊಳಿಸಿದ ಪ್ರಿಯಾಂಕಾ!

Published : Feb 14, 2019, 08:53 PM IST
ಭಯೋತ್ಪಾದಕ ದಾಳಿ: ಪತ್ರಿಕಾಗೋಷ್ಠಿ ರದ್ದುಗೊಳಿಸಿದ ಪ್ರಿಯಾಂಕಾ!

ಸಾರಾಂಶ

ಯೋಧರ ಸಾವಿಗೆ ಮಮ್ಮಲ ಮರುಗುತ್ತಿದೆ ದೇಶ| ಪತ್ರಿಕಾಗೋಷ್ಠಿ ರದ್ದುಗೊಳಿಸಿದ ಪ್ರಿಯಾಂಕಾ ಗಾಂಧಿ ವಾದ್ರಾ| ಲಕ್ನೋದಲ್ಲಿ ಕರೆಯಲಾಗಿದ್ದ ಪ್ರಿಯಾಂಕಾ ಪತ್ರಿಕಾಗೋಷ್ಠಿ ರದ್ದು| ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದ ಪ್ರಿಯಾಂಕಾ| ಕಾಂಗ್ರೆಸ್ ಮಾತ್ರವಲ್ಲ ಇಡೀ ದೇಶ ಹುಥಾತ್ಮ ಯೋಧರ ಕುಟುಂಬದ ಜೊತೆ ನಿಲ್ಲಲಿದೆ ಎಂದ ಕಾಂಗ್ರೆಸ್ ನಾಯಕಿ

ಲಕ್ನೋ(ಫೆ.14): ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಆತ್ಮಾಹುತಿ ದಾಳಿ ನಡೆಸುವ ಮೂಲಕ ಉಗ್ರರು ಅಟ್ಟಹಾಸ ಮೆರೆದಿದ್ದಾರೆ.

ಅವಂತಿಪುರ್-ಪುಲ್ವಾಮಾ ಮಾರ್ಗ ಮಧ್ಯೆ ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಸಿಆರ್ ಪಿಎಫ್ ವಾಹನದ ಮೇಲೆ ಆತ್ಮಾಹುತಿ ದಾಳಿ ನಡೆಸಿ 40 ಯೋಧರನ್ನು ಬಲಿ ಪಡೆಯಲಾಗಿದೆ.

ಕಳೆದೊಂದು ದಶಕದ ಅವಧಿಯಲ್ಲೇ ನಡೆದ ಭೀಕರ ದಾಳಿ ಇದಾಗಿದ್ದು, ಇಡೀ ದೇಶ ಆಕ್ರೋಶದ ಉರಿಯಲ್ಲಿ ಬೇಯುತ್ತಿದೆ. ಯೋಧರ ಸಾವಿಗೆ ಪ್ರತೀಕಾರಕ್ಕಾಗಿ ಇಡೀ ದೇಶ ಹಾತೊರೆಯುತ್ತಿದೆ.

ಈ ಮಧ್ಯೆ ಹುತಾತ್ಮ ಯೋಧರ ಪರ ನಿಂತ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ, ಲಕ್ನೋದಲ್ಲಿ ತಮ್ಮ ಸುದ್ದಿಗೋಷ್ಠಿ ರದ್ದು ಪಡಿಸಿ ಮೌನಾಚರಣೆ ಆಚರಿಸಿದ್ದಾರೆ. ‘ರಾಜಕೀಯ ಮಾತನಾಡಲು ಸುದ್ದಿಗೋಷ್ಟಿ ಕರೆದಿದ್ದೆ. ಆದರೆ ಇದು ರಾಜಕೀಯ ಮಾತನಾಡುವ ಸಮಯವಲ್ಲ. ಇಡೀ ದೇಶ ಹುತಾತ್ಮ ಯೋಧರ ಜೊತೆ ನಿಲ್ಲುವ ಸಮಯ. ಮೌನಾಚರಣೆ ಸಲ್ಲಿಸುವ ಮೂಲಕ ಹುತಾತ್ಮ ಯೋಧರ ಕುಟುಂಬಗಳಿಗೆ ಧೈರ್ಯ ತುಂಬೋಣ ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

ಯೋಧರನ್ನು ಕೆಳದುಕೊಂಡ ಕುಟುಂಬಗಳ ನೋವು ನನಗೆ ಅರಿವಾಗುತ್ತದೆ ಎಂದ ಪ್ರಿಯಾಂಕಾ,  ಕಾಂಗ್ರೆಸ್ ಪಕ್ಷ ಮಾತ್ರವಲ್ಲ ಇಡೀ ದೇಶ ಇವರ ಜೊತೆ ನಿಲ್ಲಬೇಕು ಎಂದು ಮನವಿ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ