
ಹುಬ್ಬಳ್ಳಿ (ಮಾ.23): ಲಿಂಗಾಯತ ಧರ್ಮದ ಶಿಫಾರಸ್ಸು ಮಾಡಿದ ರಾಜ್ಯ ಸರ್ಕಾರದ ವಿರುದ್ಧ ನಗರದ ಮಿನಿ ವಿಧಾನಸೌಧ ಮುಂದೆ ಹಿಂದೂ ಜನ ಜಾಗೃತಿ ಮತ್ತು ರಾಷ್ಟ್ರೀಯ ಹಿಂದೂ ಆಂದೋಲನ ಸಂಘಟನೆ ಪ್ರತಿಭಟನೆ ನಡೆಸಿವೆ.
ಲಿಂಗಾಯತ ಧರ್ಮದ ಶಿಫಾರಸ್ಸು ಈಗಲೇ ಸರಕಾರ ಕೈ ಬಿಡಬೇಕು. ಚುನಾವಣೆಗಾಗಿ ಹಿಂದೂ ಧರ್ಮ ಒಡೆಯಲಾಗುತ್ತಿದೆ. ಕಾಂಗ್ರೆಸ್ ಸರ್ಕಾರದ ಸ್ವತಂತ್ರ ಧರ್ಮ ಶಿಫಾರಸ್ಸು ಕೈ ಬಿಡಬೇಕು ಎಂದು ಆಗ್ರಹಿಸಿದ್ದಾರೆ.
ರೋಹಿಂಗ್ಯಾ ಮುಸ್ಮಾನರಿಗೆ ಕಾಶ್ಮೀರದಲ್ಲಿ ಆಶ್ರಯ ನೀಡಲಾಗುತ್ತಿದೆ. ಅದನ್ನು ತಕ್ಷಣ ರದ್ದುಪಡಿಸಬೇಕು. ಹಜ್ ಯಾತ್ರಿಗೆ ಸರ್ಕಾರ ನೀಡುವ ರಿಯಾಯಿತಿಯನ್ನು ರದ್ದುಪಡಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ತಹಶಿಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ನೀಡಿ ಒತ್ತಾಯಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.