
ಬೆಂಗಳೂರು(ಜು.21):ವುಡನ್ ಫ್ಲೋರಿಂಗ್ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಸಾಧ್ಯವಾದರೆ ಮಾತ್ರ ಮುಂದಿನ ವರ್ಷ ‘ಪ್ರೊ ಕಬಡ್ಡಿ’ಗೆ ಅವಕಾಶ ಕಲ್ಪಿಸಲಾಗುವುದು. ಇಲ್ಲವಾದಲ್ಲಿ, ಬೇರೆಡೆ ವ್ಯವಸ್ಥೆ ಮಾಡುವುದಾಗಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದರು. ಮಹಿಳಾ ಬಾಸ್ಕೆಟ್ಬಾಲ್ ಟೂರ್ನಿ ಅಕ್ಟೋಬರ್ವರೆಗೂ ನಡೆಯುತ್ತಿರುವ ಕಾರಣ ಈ ವರ್ಷ ಪ್ರೊ ಕಬಡ್ಡಿಗೆ ಕ್ರೀಡಾಂಗಣ ನೀಡಲು ಸಾಧ್ಯವಾಗಿಲ್ಲ. ಪರ್ಯಾಯವಾಗಿ ಕೋರಮಂಗಲ ಒಳಾಂಗಣ ಕ್ರೀಡಾಂಗಣ, ಅರಮನೆ ಮೈದಾನದಲ್ಲಿರುವ ತ್ರಿಪುರವಾಸಿನಿಯಲ್ಲಿ ಅವಕಾಶ ನೀಡುವುದಾಗಿ ತಿಳಿಸಿದ್ದೆವು. ಅದಕ್ಕೆ ಸಂಘಟಕರು ಒಪ್ಪಿಕೊಳ್ಳಲಿಲ್ಲ.
ಮುಂದಿನ ಬಾರಿ ಪರಿಸ್ಥಿತಿಗೆ ನೋಡಿಕೊಂಡು ಅವಕಾಶ ಕಲ್ಪಿಸಲಾಗುವುದು ಎಂದರು. ಕ್ರೀಡಾಂಗಣದಲ್ಲಿ ಈ ಹಿಂದೆ ಸಿಸಿಟೀವಿ ಕ್ಯಾಮೆರಾಗಳೇ ಕಳ್ಳತನವಾಗಿದ್ದವು. ಈ ಸಂಬಂಧ ನಿರ್ವಹಣೆ ಸಂಸ್ಥೆಗಳನ್ನೇ ಹೊಣೆಗಾರರನ್ನಾಗಿಸಿ ಪ್ರಕರಣ ದಾಖಲಿಸುವಂತೆಯೂ ಸೂಚನೆ ನೀಡಿದ್ದೇನೆ. ಕ್ರೀಡೆ ಎಂಬುದು ಕೇವಲ ಆಟವಲ್ಲ, ಶಿಸ್ತು ಮುಖ್ಯ. ರಕ್ಷಣೆ, ಭದ್ರತೆ, ಸೌಲಭ್ಯಕ್ಕೆ ಆದ್ಯತೆ ನೀಡುವ ಉದ್ದೇಶ ಹೊಂದಲಾಗಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.