
ಬೆಳಗಾವಿ(ಸೆ.18): ಸಹಕಾರಿ ಬ್ಯಾಂಕ್ ದಿವಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಚಿತ್ರ ನಿರ್ಮಾಪಕ ನಂದ್ ಅಪ್ಪುಗೋಳ್ ಅವರನ್ನು ಮುಂಬೈ'ನಲ್ಲಿ ಬಂಧಿಸಲಾಗಿದೆ.
ಬೆಳಗಾವಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಹಕಾರಿ ಬ್ಯಾಂಕ್ ದಿವಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಕಾರಿ ಸಂಘಗಳ ಸಹಾಯಕ ನಿಬಂಧಕರು ಸೆ.4ರಂದು ಆಡಳಿತ ಮಂಡಳಿ ವಿರುದ್ಧ ಖಡೇಬಜಾರ್ ಠಾಣೆಯಲ್ಲಿ ದೂರು ನೀಡಿದ್ದರು.
ಅಪ್ಪುಗೋಳ್ ವಿರುದ್ಧ ಠೇವಣಿದಾರರಿಗೆ ನಂಬಿಕೆ ದ್ರೋಹ, ಮೋಸ, ವಂಚನೆ, ಠೇವಣಿದಾರರಿಗೆ ನಂಬಿಕೆ ದ್ರೋಹ, ಸಾರ್ವಜನಿಕರ ಠೇವಣಿ ಹಣವನ್ನ ಸಕಾಲಕ್ಕೆ ಪಾವತಿಲ್ಲ, ನಿಯಮವನ್ನು ಗಾಳಿಗೆ ತೂರಿ ಠೇವಣಿ ಹಣವನ್ನು ಬೇಕಾಬಿಟ್ಟಿ ವಿನಿಯೋಗ ಹಾಗೂ ಬ್ಯಾಂಕ್ ಕಚೇರಿಗೆ ಬೀಗ ಹಾಕಿ ಠೇವಣಿದಾರರಿಗೆ ಮೋಸ ಮಾಡಲಾಗಿದೆ ಎಂದು ಪ್ರಕರಣ ದಾಖಲಿಸಲಾಗಿತ್ತು.
ಸೆ.4ರಿಂದ ಅಪ್ಪುಗೋಳ್ ತಲೆಮರೆಸಿಕೊಂಡಿದ್ದರು. ಗ್ರಾಹಕರು ಹಲವು ಬಾರಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.