ಸ್ಟಂಟ್ ಮಾಸ್ಟರ್ ರವಿವರ್ಮಾರನ್ನು ನಿಷೇಧಿಸಲು ನಿರ್ಮಾಪಕ ದಯಾಳ್ ಆಗ್ರಹ

Published : Nov 07, 2016, 04:44 PM ISTUpdated : Apr 11, 2018, 01:04 PM IST
ಸ್ಟಂಟ್ ಮಾಸ್ಟರ್ ರವಿವರ್ಮಾರನ್ನು ನಿಷೇಧಿಸಲು ನಿರ್ಮಾಪಕ ದಯಾಳ್ ಆಗ್ರಹ

ಸಾರಾಂಶ

"ಸಾಕಷ್ಟು ಚಿತ್ರಗಳಿಗೆ ಕೆಲಸ ಮಾಡುವ ರವಿವರ್ಮಾ ಯಾವುದೇ ಪೂರ್ವಸಿದ್ಧತೆ(ಹೋಮ್'ವರ್ಕ್) ಇಲ್ಲದೆಯೇ ಶಾಟ್'ಗಳನ್ನು ರಚಿಸುತ್ತಾರೆ ಎಂದು ದಯಾಳ್ ಆರೋಪಿಸಿದರು.

ಬೆಂಗಳೂರು(ನ. 07): ಸಾಹಸ ನಿರ್ದೇಶಕ ರವಿವರ್ಮಾ ಅವರನ್ನು ಎರಡು ವರ್ಷ ನಿಷೇಧಿಸಬೇಕೆಂದು ನಿರ್ದೇಶಕ ಹಾಗೂ ನಿರ್ಮಾಪಕ ದಯಾಳ್ ಆಗ್ರಹಿಸಿದರು. ಮಾಸ್ತಿಗುಡಿ ಚಿತ್ರೀಕರಣದ ವೇಳೆ ಇಬ್ಬರು ನಟರ ದುರ್ಮರಣವಾದ ಘಟನೆಗೆ ಪ್ರತಿಕ್ರಿಯಿಸಿದ ದಯಾಳ್, ಈ ಘಟನೆಗೆ ಸ್ಟಂಟ್ ಮಾಸ್ಟರ್ ರವಿವರ್ಮಾರೇ ಹೊಣೆ ಎಂದು ಅಭಿಪ್ರಾಯಪಟ್ಟರು. ಸಾಕಷ್ಟು ಚಿತ್ರಗಳಿಗೆ ಕೆಲಸ ಮಾಡುವ ರವಿವರ್ಮಾ ಯಾವುದೇ ಪೂರ್ವಸಿದ್ಧತೆ(ಹೋಮ್'ವರ್ಕ್) ಇಲ್ಲದೆಯೇ ಶಾಟ್'ಗಳನ್ನು ರಚಿಸುತ್ತಾರೆ ಎಂದು ದಯಾಳ್ ಆರೋಪಿಸಿದರು.

ಈ ಘಟನೆ ವಿರುದ್ಧ ಖಂಡಿತವಾಗಿ ಧ್ವನಿ ಎತ್ತುವುದಾಗಿ ಭರವಸೆ ನೀಡಿದ ದಯಾಳ್, ತಾನು ಒಬ್ಬ ನಿರ್ಮಾಪಕನಾಗಿ ರವಿವರ್ಮಾ ಅವರನ್ನು ಎರಡು ವರ್ಷ ಚಿತ್ರರಂಗದಿಂದ ನಿಷೇಧಿಸಬೇಕೆಂದು ಆಗ್ರಹಿಸುತ್ತೇನೆ ಎಂದು ಹೇಳಿದರು.

ಸಂತು ಸ್ಟ್ರೈಟ್ ಫಾರ್ವರ್ಡ್ ಸಿನಿಮಾದ ಚಿತ್ರೀಕರಣ ವೇಳೆ ಒಂದು ಘಟನೆಯನ್ನು ದಯಾಳ್ ಉದಾಹರಣೆಯಾಗಿ ನೀಡಿದರು. ಸಾಹಸ ದೃಶ್ಯದ ಶೂಟಿಂಗ್ ವೇಳೆ ಸ್ಟಂಟ್'ಮ್ಯಾನ್'ವೊಬ್ಬನ ತಲೆಗೆ ಗಾಜು ಒಡೆದು ಸಾಕಷ್ಟು ರಕ್ತ ಸೋರುತ್ತಿರುತ್ತದೆ. ಆದರೆ, ರವಿವರ್ಮಾ ಇದಕ್ಕೆ ಕೇರ್ ಮಾಡದೇ ಮುಂದಿನ ದೃಶ್ಯದ ಚಿತ್ರೀಕರಣಕ್ಕೆ ಮುಂದಾಗುತ್ತಾರೆ. ಈ ಘಟನೆ ತನಗೆ ಬಹಳ ನೋವು ತಂದಿತ್ತು ಎಂದು ದಯಾಳ್ ಆ ಘಟನೆಯನ್ನು ಸುವರ್ಣನ್ಯೂಸ್ ಜೊತೆ ನೋವಿನಿಂದ ಹಂಚಿಕೊಂಡರು.

ದುನಿಯಾ ವಿಜಿ ಅಭಿನಯದ "ಮಾಸ್ತಿಗುಡಿ" ಸಿನಿಮಾಕ್ಕೆ ರವಿ ವರ್ಮಾ ಅವರೇ ಸಾಹಸ ನಿರ್ದೇಶಕರು. ಇವರ ಸ್ಟಂಟ್ ಡೈರೆಕ್ಷನ್'ನಲ್ಲೇ ಅಪಾಯಕಾರಿ ಹೆಲಿಕಾಪ್ಟರ್ ಜಂಪ್ ಘಟನೆ ನಡೆದದ್ದು. ಇಂಥ ಡೇಂಜರ್ ಸ್ಟಂಟ್ ಚಿತ್ರೀಕರಣಕ್ಕೆ ಬೇಕಾದ ಯಾವುದೇ ಸೇಫ್ಟಿ ಮೆಷರ್ಸನ್ನು ತೆಗೆದುಕೊಂಡಿರಲಿಲ್ಲವೆಂಬ ಆರೋಪವಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಂಗಳೂರಿನಲ್ಲಿ ರಿಷಬ್ ಶೆಟ್ಟಿ ಹರಕೆ ನೇಮ ವಿವಾದ, ತಮ್ಮಣ್ಣ ಶೆಟ್ಟಿ ಎತ್ತಿದ ಹಲವು ಪ್ರಶ್ನೆಗಳಿವು
ಬೆಂಗಳೂರಲ್ಲಿ ಚಿನ್ನದ ಬೆಲೆ 15,200 ರೂ ಇಳಿಕೆ, ಬಂಗಾರ ಖರೀದಿಗೆ ಇದು ಸೂಕ್ತ ಸಮಯವೇ?