OROP ಆತ್ಮಹತ್ಯೆ: ನಿಷೇಧಾಜ್ಞೆ ಜಾರಿಗೊಳಿಸಿದ ದೆಹಲಿ ಪೊಲೀಸರು

Published : Nov 03, 2016, 05:15 AM ISTUpdated : Apr 11, 2018, 01:08 PM IST
OROP ಆತ್ಮಹತ್ಯೆ: ನಿಷೇಧಾಜ್ಞೆ ಜಾರಿಗೊಳಿಸಿದ ದೆಹಲಿ ಪೊಲೀಸರು

ಸಾರಾಂಶ

ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆ ಹೊರಭಾಗದಲ್ಲಿ ನಿನ್ನೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದ ಹಿನ್ನೆಲೆಯಲ್ಲಿ ಇಂದು ದೆಹಲಿ ಪೊಲೀಸರು ಸೆ,144 ಅನ್ನು ಜಾರಿಗೊಳಿಸಿದ್ದಾರೆ. ನಿಷೇಧಾಜ್ಞೆಯು ಡಿ.28ವರೆಗೆ ಮುಂದುವರೆಯಲಿರುವುದು ಎನ್ನಲಾಗಿದೆ.

ನವದೆಹಲಿ (ನ.02): ಸಮಾನ ಹುದ್ದೆ-ಸಮಾನ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸುವಲ್ಲಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ವಿಳಂಬದಿಂದ ಬೇಸತ್ತು ಮಾಜಿ ಯೋಧ ಆತ್ಮಹತ್ಯೆ ಮಾಡಿರುವ ಘಟನೆ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಕನ್ನಾಟ್’ಪ್ಲೇಸ್’ನಲ್ಲಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ನಿವೃತ್ತ ಯೋಧ ರಾಮ್ ಕಿಶನ್ ಗ್ರೆವಾಲ್ ಮೃತದೇಹವಿಡಲಾಗಿದ್ದ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆ ಹೊರಭಾಗದಲ್ಲಿ ನಿನ್ನೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದ ಹಿನ್ನೆಲೆಯಲ್ಲಿ ಇಂದು ದೆಹಲಿ ಪೊಲೀಸರು ಸೆ,144 ಅನ್ನು ಜಾರಿಗೊಳಿಸಿದ್ದಾರೆ. ನಿಷೇಧಾಜ್ಞೆಯು ಡಿ.28ವರೆಗೆ ಮುಂದುವರೆಯಲಿರುವುದು ಎನ್ನಲಾಗಿದೆ.

ಗ್ರೆವಾಲ್ ಕುಟುಂಬಸ್ಥರು, ಆತ್ಮಹತ್ಯೆಗೆ ಕೇಂದ್ರ ಸರ್ಕಾರವೇ ಕಾರಣ ಎಂದು ಆರೋಪಿಸಿದ್ದಾರೆ ಹಾಗೂ ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆ ಗ್ರೆವಾಲ್, ಸಮಾನ ಪಿಂಚಣಿ ವಿಚಾರದಲ್ಲಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್’ಗೆ ಪತ್ರ ಬರೆದಿದ್ದರು.

ಮೃತ ಕುಟುಂಬದ ಸದಸ್ಯರನ್ನು ಭೇಟಿಯಾಗಲು ತೆರಳಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಉಪ-ಮುಖ್ಯಮಂತ್ರಿ ಮನೀಶ್ ಸಿಸೋದಿಯಾ ಅವರನ್ನು ದೆಹಲಿ ಪೊಲೀಸರು ಗೇಟ್’ನಲ್ಲೇ ತಡೆದು ವಶಕ್ಕೆ ಪಡೆದಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು
ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ