ಬಿಜೆಪಿ ಮುಖಂಡನಿಂದ ಹೊಸ ವಿವಾದ

Published : Jun 06, 2018, 03:01 PM ISTUpdated : Jun 06, 2018, 03:04 PM IST
ಬಿಜೆಪಿ ಮುಖಂಡನಿಂದ ಹೊಸ ವಿವಾದ

ಸಾರಾಂಶ

ಸರ್ಕಾರಿ ಅಧಿಕಾರಿಗಳಿಗಿಂತ ವೇಶ್ಯೆಯರೇ ಮೇಲು ಎನ್ನುವಂತಹ ಹೇಳಿಕೆ ನೀಡುವ ಮೂಲಕ ಉತ್ತರ  ಪ್ರದೇಶದ  ಬಿಜೆಪಿ ಮುಖಂಡ  ಸುರೇಂದ್ರ ಸಿಂಗ್ ವಿವಾದಕ್ಕೀಡಾಗಿದ್ದಾರೆ. 

ಬೆಂಗಳೂರು : ಸರ್ಕಾರಿ ಅಧಿಕಾರಿಗಳಿಗಿಂತ ವೇಶ್ಯೆಯರೇ ಮೇಲು ಎನ್ನುವಂತಹ ಹೇಳಿಕೆ ನೀಡುವ ಮೂಲಕ ಉತ್ತರ  ಪ್ರದೇಶದ  ಬಿಜೆಪಿ ಮುಖಂಡ  ಸುರೇಂದ್ರ ಸಿಂಗ್  ಸಾರ್ವಜನಿಕ ಸಭೆಯಲ್ಲಿ ಇಂತಹ ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. 

ವೇಶ್ಯೆಯರು ಸರ್ಕಾರಿ ಅಧಿಕಾರಿಗಳಿಗಿಂತ ಉತ್ತಮ, ಯಾಕೆಂದರೆ ಅವರು ಕೆಲಸವಾದ ಮೇಲೆ ಹಣವನ್ನು ತೆಗೆದುಕೊಳ್ಳುತ್ತಾರೆ.  ಆದರೆ ಸರ್ಕಾರಿ ಅಧಿಕಾರಿಗಳು ಹಣವನ್ನು ತೆಗೆದುಕೊಂಡರೂ ಕೂಡ   ಕೆಲಸ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಹಣ ನೀಡಿದರೂ ಅವರಿಂದ ಕೆಲಸವಾಗುತ್ತದೆ ಎನ್ನುವ ಯಾವುದೇ ನಂಬಿಕೆ ಇರುವುದಿಲ್ಲ ಎಂದಿದ್ದಾರೆ. 

ಇತ್ತೀಚೆಗಷ್ಟೇ ಉತ್ತರ ಪ್ರದೇಶದ 2 ಕ್ಷೇತ್ರಗಳಾದ ಕೈರಾನ ಹಾಗೂ ನೂಪುರ್ ಪ್ರದೇಶಗಳಲ್ಲಿ ಉಪ ಚುನಾವಣೆ ನಡೆದಿದ್ದು, 2 ಕ್ಷೇತ್ರಗಳಲ್ಲಿಯೂ ಕೂಡ ಬಿಜೆಪಿ ಸೋಲನ್ನು ಅನುಭವಿಸಿದೆ. ಇದೇ  ಬೆನ್ನಲ್ಲೇ ಅಲ್ಲಿನ ಬಿಜೆಪಿ ನಾಯಕ ಸುರೇಂದ್ರ ಸಿಂಗ್ ಇಂತಹ ಹೇಳಿಕೆ ನೀಡಿದ ವಿವಾದಕ್ಕೀಡಾಗಿದ್ದಾರೆ.  

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪಕ್ಷದ ಮುಖಂಡರಿಗೆ ಎಚ್ಚರಿಕೆಯನ್ನು ನೀಡಿದ್ದರು. ಬಾಯಿಗೆ ಬಂದಂತೆ ಮಾತನಾಡುವ ಮೂಲಕ ಮಾಧ್ಯಮಗಳಿಗೆ ಮಸಾಲೆ ಒದಗಿಸಬೇಡಿ ಎಂದಿದ್ದರು. ಆದರೂ ಕೂಡ ಕೆಲ ಬಿಜೆಪಿ ಮುಖಂಡರು ತಮ್ಮ  ವಿವಾದಿತ ಹೇಳಿಕೆಗಳನ್ನು ಮುಂದುವರಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

8ನೇ ಕ್ಲಾಸ್ ಹುಡುಗಿ ಮೇಲೆ ಬಲತ್ಕಾರ, ಬೆದರಿಸಿ ಚಿನ್ನ ದೋಚಿದ್ದ 10ನೇ ಕ್ಲಾಸ್ ಹುಡುಗ ಅರೆಸ್ಟ್
ಬಿಜೆಪಿ ನಾಯಕನ ಸಂಬಂಧಿ 17ರ ಯುವಕನಿಗೆ ಚೂರಿ ಇರಿದು ಕೊಂದ ದುಷ್ಕರ್ಮಿಗಳು!