ಪೌರತ್ವ ಬಿಲ್‌ಗೆ ವಿರೋಧ: ಸಾಹಿತಿ ಸೇರಿ 3 ಜನರ ಮೇಲೆ ರಾಜದ್ರೋಹ

Published : Jan 11, 2019, 11:40 AM ISTUpdated : Jan 11, 2019, 11:45 AM IST
ಪೌರತ್ವ ಬಿಲ್‌ಗೆ ವಿರೋಧ: ಸಾಹಿತಿ ಸೇರಿ 3 ಜನರ ಮೇಲೆ ರಾಜದ್ರೋಹ

ಸಾರಾಂಶ

ಪೌರತ್ವ ತಿದ್ದುಪಡಿ ಬಿಲ್‌ಗೆ ವಿರೋಧ ವ್ಯಕ್ತಪಡಿಸಿದ ಸಾಹಿತಿ ಹಿರೇನ್ ಗೋಹ್ಯಾನ್ ಸೇರಿ ಮೂವರ ಮೇಲೆ ರಾಜದ್ರೋಹ ಕೇಸ್

ಗುವಾಹಟಿ[ಜ.11]: ಪ್ರತಿಪಕ್ಷಗಳ ಪ್ರತಿಭಟನೆ ನಡುವೆಯೂ ಬುಧವಾರ ಲೋಕಸಭೆಯಲ್ಲಿ ಅಂಗೀಕಾರ ಪಡೆದ ವಿವಾದಿತ ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿ ಅಸ್ಸಾಂ ಸಾಹಿತಿ ಹಿರೇನ್‌ ಗೊಹೇನ್‌, ಆರ್‌ಟಿಐ ಕಾರ್ಯಕರ್ತ ಅಖಿಲ್‌ ಗೊಗೋಯ್‌ ಹಾಗೂ ಹಿರಿಯ ಪತ್ರಕರ್ತರ ವಿರುದ್ಧ ರಾಷ್ಟ್ರದ್ರೋಹ ಕೇಸ್‌ ದಾಖಲಾಗಿದೆ.

ಮುಸ್ಲಿಮೇತರರಿಗೆ ಪೌರತ್ವ: ಲೋಕಸಭೆಯಲ್ಲಿ ಅಂಗೀಕಾರ ಸಿಗ್ತಪ್ಪ!

ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ರಾಜ್ಯಾದ್ಯಂತ ಕಳೆದ ಮೂರು ದಿನಗಳಿಂದ ಹೋರಾಟ ತೀವ್ರಗೊಂಡಿತ್ತು. ಈ ವೇಳೆ ನಗರದಲ್ಲಿ ನಿಷೇಧಾಜ್ಞೆ ಆದೇಶ ಜಾರಿಯಲ್ಲಿದ್ದರೂ, ಈ ಮೂವರು ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಹೇಳಿಕೆ ನೀಡಿದ್ದರು.

ಪೌರತ್ವ ಕಾಯ್ದೆ ಅಂಗೀಕಾರ ಮಾಡದಿದ್ದಲ್ಲಿ 5 ವರ್ಷದಲ್ಲಿ ಹಿಂದೂಗಳೇ ಅಲ್ಪಸಂಖ್ಯಾತರು

ಈ ಹಿನ್ನೆಲೆ ಸ್ವಯಂಪ್ರೇರಿತವಾಗಿ ರಾಜದ್ರೋಹದ ಕೇಸ್‌ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಜಿತ್ ಪವಾರ್ ವಿಮಾನ ಪತನ ಆಕಸ್ಮಿಕವಲ್ಲ, ಇದೊಂದು ವ್ಯವಸ್ಥಿತ ಕೊಲೆ: ಬೆಂಗಳೂರಲ್ಲಿ ದಾಖಲಾಯ್ತು ಎಫ್‌ಐಆರ್‌
'ಹೆಂಗಸ್ರಿಗೆ ಫ್ರೀ ಫ್ರಿಜ್‌, ಶಿಕ್ಷಣ ಸಾಲ ಸಂಪೂರ್ಣ ಮನ್ನಾ..' ಚುನಾವಣೆಗೆ ಜಯಮ್ಮನ ಪಕ್ಷದಿಂದ ಭರ್ಜರಿ ಪ್ರಣಾಳಿಕೆ!