
ಕನ್ಯಾ ಸಂಸ್ಕಾರ ಕಾರ್ಯಕ್ರಮ ವಿರೋಧಿಸಿ ದಲಿತ ಸಂಘಟನೆಗಳು, ಬೆಂಗಳೂರಿನ ಗಿರಿನಗರದಲ್ಲಿರುವ ರಾಮಚಂದ್ರಾಪುರ ಮಠಕ್ಕೆ ಮುತ್ತಿಗೆ ಯತ್ನ ನಡೆಸಿದರು.
ರಾಘವೇಶ್ವರ ಶ್ರೀಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ದಲಿತ ಸಂಘಟನೆಗಳು, ವಂದೇ ಗೋಮಾತರಂ ಘೋಷಣೆ ಕೂಗಿದರು. ರಾಘವೇಶ್ವರ ಶ್ರೀಗಳ ವಿರುದ್ಧ ಅತ್ಯಾಚಾರ ಆರೋಪವಿದೆ. ಇಂತವರು ಹೆಣ್ಣು ಮಕ್ಕಳಿಗೆ ಕನ್ಯಾಸಂಸ್ಕಾರ ಮಾಡುವುದು ಎಷ್ಟು ಸರಿ ? ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಬೆಳಗ್ಗಿನಿಂದ ರಾಮಚಂದ್ರಾಪುರ ಮಠದಲ್ಲಿ ಕನ್ಯಾ ಸಂಸ್ಕಾರ ನಡೀತಿದ್ದು, ದಲಿತ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಆನೇಕಲ್ ಸೇರಿದಂತೆ ಬೇರೆ ಭಾಗಗಳಿಂದ ಬಂದ ಪ್ರತಿಭಟನಾಕಾರರು ರಾಘವೇಶ್ವರ ಶ್ರೀಗಳ ವಿರುದ್ಧ ಘೋಷಣೆ ಕೂಗಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.