ಗೌರಿ ಲಂಕೇಶ್ ಹತ್ಯೆ ಖಂಡಿಸಿ ರಾಜ್ಯದ ಹಲವೆಡೆ ಪ್ರತಿಭಟನೆ

Published : Sep 06, 2017, 12:58 AM ISTUpdated : Apr 11, 2018, 12:44 PM IST
ಗೌರಿ ಲಂಕೇಶ್ ಹತ್ಯೆ ಖಂಡಿಸಿ ರಾಜ್ಯದ ಹಲವೆಡೆ ಪ್ರತಿಭಟನೆ

ಸಾರಾಂಶ

ಹುಬ್ಬಳ್ಳಿ ಮೊದಲಾದ ಕೆಲ ಸ್ಥಳಗಳಲ್ಲಿ ಪ್ರತಿಭಟನೆಗಳು ನಡೆದ ಬಗ್ಗೆ ವರದಿಯಾಗಿದೆ. ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಕ್ಯಾಂಡಲ್ ಲೈಟ್ ಪ್ರತಿಭಟನೆ ನಡೆಯಿತು. ನೂರಾರು ಸಂಖ್ಯೆಯಲ್ಲಿ ಜನರು ಸೇರಿ ಗೌರಿ ಲಂಕೇಶ್ ಹತ್ಯೆ ಘಟನೆಯನ್ನು ಶಾಂತಿಯುತವಾಗಿ ಖಂಡಿಸಿದರು.

ಬೆಂಗಳೂರು(ಸೆ. 06): ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಖಂಡಿಸಿ ರಾಜ್ಯದ ಹಲವೆಡೆ ಪ್ರತಿಭಟನೆಗಳಾಗಿವೆ. ಶಿವಮೊಗ್ಗ ನಗರದ ಅಮೀರ್ ಅಹಮದ್ ವೃತ್ತದಲ್ಲಿ ಪತ್ರಕರ್ತರು ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರಿಂದ ಪ್ರತಿಭಟನೆ ನಡೆಯಿತು. ಪತ್ರಕರ್ತರಾದ ಎನ್.ಮಂಜುನಾಥ್, ಶೃಂಗೇಶ್, ವಿಮರ್ಶಕ ಡಾ. ಶ್ರೀಕಂಠ ಕೂಡಿಗೆ, ಕೋಮುಸೌಹಾರ್ದ ವೇದಿಕೆಯ ಕೆ.ಎಲ್.ಅಶೋಕ್, ಶಿವಕುಮಾರ್, ಸರ್ಜಾಶಂಕರ ಹರಳೀಮಠ ಮತ್ತಿತರರು ಭಾಗವಹಿಸಿದ್ದರು.

ಇದೇ ವೇಳೆ, ಹುಬ್ಬಳ್ಳಿ ಮೊದಲಾದ ಕೆಲ ಸ್ಥಳಗಳಲ್ಲಿ ಪ್ರತಿಭಟನೆಗಳು ನಡೆದ ಬಗ್ಗೆ ವರದಿಯಾಗಿದೆ. ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಕ್ಯಾಂಡಲ್ ಲೈಟ್ ಪ್ರತಿಭಟನೆ ನಡೆಯಿತು. ನೂರಾರು ಸಂಖ್ಯೆಯಲ್ಲಿ ಜನರು ಸೇರಿ ಗೌರಿ ಲಂಕೇಶ್ ಹತ್ಯೆ ಘಟನೆಯನ್ನು ಶಾಂತಿಯುತವಾಗಿ ಖಂಡಿಸಿದರು.

ಇನ್ನು, ನಾಳೆ ರಾಜ್ಯಾದ್ಯಂತ ಹಲವು ಕಡೆ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಟೌನ್ ಹಾಲ್'ನಲ್ಲೂ ಪ್ರತಿಭಟನೆಗಳಾಗಲಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೂರು ಮನೆ, 3 ಆಟೋ, ಒಂದು ಕಾರು ಜೊತೆಗೆ ಡ್ರೈವರ್, ಈತ ಭಾರತದ ಕೋಟ್ಯಾಧಿಪತಿ ಭಿಕ್ಷುಕ
ಗಿಲ್ಲಿ ನಟ ರಾಜಕೀಯ ಎಂಟ್ರಿ: ವೋಟು ಕೇಳಿದ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ, ವಿಶ್ ಮಾಡಿದ ಕುಮಾರಸ್ವಾಮಿ!