'ಪದ್ಮಾವತಿ' ಚಿತ್ರ ಬಿಡುಗಡೆ ಖಂಡಿಸಿ ಟಾಕೀಸ್'ಗೆ ಮುತ್ತಿಗೆ

Published : Nov 14, 2017, 05:02 PM ISTUpdated : Apr 11, 2018, 01:04 PM IST
'ಪದ್ಮಾವತಿ' ಚಿತ್ರ ಬಿಡುಗಡೆ ಖಂಡಿಸಿ ಟಾಕೀಸ್'ಗೆ ಮುತ್ತಿಗೆ

ಸಾರಾಂಶ

ಪದ್ಮಾವತಿ ಚಿತ್ರ ಬಿಡುಗಡೆ ವಿರೋಧಿಸಿ ಪ್ರತಿಭಟನೆ ಮುಂದುವರೆದಿದೆ. ರಾಜಸ್ಥಾನದಲ್ಲಿ ಹಿಂಸಾಚಾರ ನಡೆದಿದೆ.  ಶ್ರೀ ರಜಪೂತ ಕರ್ಣಿಸೇನಾ ಕಾರ್ಯಕರ್ತರು ಟಾಕೀಸ್'ಗೆ ಮುತ್ತಿಗೆ ಹಾಕಿದ್ದಾರೆ.  ಕೋಟದಲ್ಲಿನ ಆಕಾಶ್ ಥಿಯೇಟರ್'ಗೆ ನುಗ್ಗಿ ದಾಂಧಲೆ ನಡೆಸಿ, ಥಿಯೇಟರ್ ಕಿಟಕಿ ಗಾಜುಗಳನ್ನು ಪುಡಿಪುಡಿ ಮಾಡಿದ್ದಾರೆ.

ರಾಜಸ್ಥಾನ(ನ.14): ಪದ್ಮಾವತಿ ಚಿತ್ರ ಬಿಡುಗಡೆ ವಿರೋಧಿಸಿ ಪ್ರತಿಭಟನೆ ಮುಂದುವರೆದಿದೆ. ರಾಜಸ್ಥಾನದಲ್ಲಿ ಹಿಂಸಾಚಾರ ನಡೆದಿದೆ.  ಶ್ರೀ ರಜಪೂತ ಕರ್ಣಿಸೇನಾ ಕಾರ್ಯಕರ್ತರು ಟಾಕೀಸ್'ಗೆ ಮುತ್ತಿಗೆ ಹಾಕಿದ್ದಾರೆ.  ಕೋಟದಲ್ಲಿನ ಆಕಾಶ್ ಥಿಯೇಟರ್'ಗೆ ನುಗ್ಗಿ ದಾಂಧಲೆ ನಡೆಸಿ, ಥಿಯೇಟರ್ ಕಿಟಕಿ ಗಾಜುಗಳನ್ನು ಪುಡಿಪುಡಿ ಮಾಡಿದ್ದಾರೆ.

ಪದ್ಮಾವತಿ ಚಿತ್ರದಲ್ಲಿ ಇತಿಹಾಸ ತಿರುಚಿದ್ದಾರೆ. ರಾಣಿ ಪದ್ಮಾವತಿ ಬಗ್ಗೆ ಕೆಟ್ಟದಾಗಿ ಚಿತ್ರಿಸಿದ್ದಾರೆ ಎನ್ನುವ ಆರೋಪದಡಿಯಲ್ಲಿ ಹಿಂದಿನಿಂದಲೂ ಪದ್ಮಾವತಿ ಚಿತ್ರ ಬಿಡುಗಡೆ ಕರ್ಣಿ ಸೇನಾ ಆಕ್ಷೇಪಣೆ ವ್ಯಕ್ತಪಡಿಸುತ್ತಿದೆ. ಒಂದು ವೇಳೆ ಚಿತ್ರ ಬಿಡುಗಡೆ ಮಾಡಿದರೆ ಥಿಯೇಟರ್ ಧ್ವಂಸ ಮಾಡುತ್ತೇವೆಂದು ನ.10ರಂದು ಕರ್ಣಿ ಸೇನಾ ವಿಡಿಯೋ ರಿಲೀಸ್ ಮಾಡಿದೆ. ಇದಲ್ಲದೇ ರಜಪೂತ ಸಮುದಾಯದಲ್ಲಿ ಮಹಿಳೆಯರೂ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಗ್ರಾಹಕರಿಗೆ ಬಂಪರ್‌ ಪ್ಲ್ಯಾನ್‌ ಘೋಷಿಸಿದ Vi: 61 ರೂಪಾಯಿಯ ಮೊಬೈಲ್‌ ರಿಚಾರ್ಜ್‌ಗೆ 25 ಸಾವಿರದ ಬೆನಿಫಿಟ್‌!