ಆಸ್ಪತ್ರೆ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

Published : Nov 19, 2017, 02:17 PM ISTUpdated : Apr 11, 2018, 12:36 PM IST
ಆಸ್ಪತ್ರೆ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

ಸಾರಾಂಶ

ಉಡುಪಿಯಲ್ಲಿ ಇಂದು ಖಾಸಗಿ ಮತ್ತು ಸರ್ಕಾರಿ ಸಹಭಾಗಿತ್ವದ ನೂತನ ಹೆರಿಗೆ ಆಸ್ಪತ್ರೆ ಉದ್ಘಾಟನೆಯಾಗಲಿದೆ. ಸಿಎಂ ಸಿದ್ದರಾಮಯ್ಯ, ಆರೋಗ್ಯ ಸಚಿವ ರಮೇಶ್ ಕುಮಾರ್ ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದು, ಸರ್ಕಾರದ ಈ ನೂತನ ಯೋಜನೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಉಡುಪಿ: ಉಡುಪಿಯಲ್ಲಿ ಇಂದು ಖಾಸಗಿ ಮತ್ತು ಸರ್ಕಾರಿ ಸಹಭಾಗಿತ್ವದ ನೂತನ ಹೆರಿಗೆ ಆಸ್ಪತ್ರೆ ಉದ್ಘಾಟನೆಯಾಗಲಿದೆ. ಸಿಎಂ ಸಿದ್ದರಾಮಯ್ಯ, ಆರೋಗ್ಯ ಸಚಿವ ರಮೇಶ್ ಕುಮಾರ್ ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದು, ಸರ್ಕಾರದ ಈ ನೂತನ ಯೋಜನೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಸರ್ಕಾರಿ ಆಸ್ಪತ್ರೆ ಉಳಿಸಿ ಎಂಬ ಆಶಯದಲ್ಲಿ ಕೆಲ ಪ್ರಜ್ಞಾವಂತ ನಾಗರಿಕರು ಸಿಎಂ ಭೇಟಿ ಹಾಗೂ ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ.

ದುಬೈನ ಉದ್ಯಮಿ ಬಿ.ಆರ್,ಶೆಟ್ಟಿ ಅವರಿಗೆ ಸರ್ಕಾರಿ ಆಸ್ಪತ್ರೆಯ ಭೂಮಿಯನ್ನು ಕೊಟ್ಟು ಅಲ್ಲಿ ಖಾಸಗಿ ಸ್ವಾಮ್ಯದ ಎರಡು ಆಸ್ಪತ್ರೆ ಆರಂಭಿಸಲಾಗುತ್ತಿದೆ. ಆಸ್ಪತ್ರೆಗಳ ಖಾಸಗೀಕರಣವನ್ನು ವಿರೋಧಿಸುವ ಸರ್ಕಾರ ಇಲ್ಲಿ ತಾನೇ ಮುಂದೆ ನಿಂತು ಸರ್ಕಾರಿ ಭೂಮಿ ಮತ್ತು ಆಸ್ಪತ್ರೆಯನ್ನು ಖಾಸಗಿ ವ್ಯಕ್ತಿಯ ಕೈಗೆ ನೀಡಿರೋದು ಚರ್ಚೆಗೆ ಗ್ರಾಸವಾಗಿದೆ.

ಹಾಗಾಗಿ ಅಜ್ಜರಕಾಡು ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಸೇರಿದ ನಾಗರಿಕರು ಹೋರಾಟ ನಡೆಸಿದ್ದಾರೆ. ಬಿ.ಆರ್. ಶೆಟ್ಟಿ ನಿರ್ಮಿಸಿದ ಹೆರಿಗೆ ಆಸ್ಪತ್ರೆಯನ್ನು ಸರ್ಕಾರ ಸಂಪೂರ್ಣ ಸ್ವಾಮ್ಯಕ್ಕೆ ಪಡೆಯಬೇಕು ಎಂಬುವುದು ಪ್ರತಿಭಟನಾಕಾರರ ಆಗ್ರಹವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸೈಕಲ್‌ನಲ್ಲಿ ಓಡಾಡ್ತಿದ್ದ ಯೂಟ್ಯೂಬರ್ ಬಳಿ ಈಗ ಹಲವು ಐಷಾರಾಮಿ ಕಾರು: ದುಬೈನಲ್ಲಿ ಅದ್ದೂರಿ ಮದುವೆ: ಇಡಿ ದಾಳಿ
ಮಂಗಳೂರಿಗೆ 1200 ಕೋಟಿ ಯುಜಿಡಿ ಪ್ಲ್ಯಾನ್, ನಾಯಿಗಳ ಪುನರ್ವಸತಿಗೆ 10 ಎಕರೆ, ದಶಕಗಳ ಸಮಸ್ಯೆಗೆ ಸಿಗುವುದೇ ಮುಕ್ತಿ?