
ವಿಜಯಪುರ, [ಮಾ.02]: ಶಿಕ್ಷಕರು ಅಂದ್ರೆ ದೇವರ ಸಮಾನ ಅಂತಾರೆ, ಆದರೆ ಇಲ್ಲೊಬ್ಬ ಶಿಕ್ಷಕ ಮಾತ್ರ ಇದಕ್ಕೆ ತದ್ವಿರುದ್ಧವಾಗಿದ್ದಾನೆ.
ಗೃಹ ಸಚಿವ ಎಮ್. ಬಿ. ಪಾಟೀಲ್ ಮಾಲೀಕತ್ವದ ಬಿ.ಎಲ್.ಡಿ.ಇ ಸಂಸ್ಥೆಯ ಇಂಜಿನಿಯರಿಂಗ್ ಕಾಲೇಜಿನ ಅಧ್ಯಾಪಕ ಸಂದೀಪ್ ಎನ್ನುವಾತ ದೇಶದ್ರೋಹಿ ಕೆಲಸ ಮಾಡಿದ್ದಾನೆ.
ಪುಲ್ವಾಮಾ ದಾಳಿ ಬಳಿಕ ಭಾರತ-ಪಾಕ್ ನಡುವೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪಾಕ್ ನ ಉಗ್ರ ಕೃತ್ಯವನ್ನು ಇಡೀ ದೇಶವೇ ಖಂಡಿಸಿ ಆಕ್ರೋಶ ವ್ಯಕ್ತಪಡಿಸುತ್ತಿದೆ.
ಪಾಕ್ ಸೇನೆ ಬೆಂಬಲಿಸಿ ಪೋಸ್ಟ್ : ಬಳ್ಳಾರಿ ಯುವಕ ಅರೆಸ್ಟ್
ಹೀಗಿರುವಾಗ ಬಿ.ಎಲ್.ಡಿ.ಇ ಸಂಸ್ಥೆಯ ಇಂಜಿನಿಯರಿಂಗ್ ಕಾಲೇಜಿನ ಅಧ್ಯಾಪಕ ಸಂದೀಪ್, ಫೇಸ್ ಬುಕ್ ನಲ್ಲಿ ಬಿಜೆಪಿಯನ್ನು ಟೀಕಿಸಲು ಹೋಗಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಪರ ಬ್ಯಾಟಿಂಗ್ ಮಾಡಿದ್ದಾರೆ.
ಇದ್ರಿಂದ ಸಾಮಾಜಿಲ ಜಾಲತಾಣಗಳಲ್ಲಿ ಆಕ್ರೋಶಗಳು ವ್ಯಕ್ತವಾಗಿದ್ದು, ಕಾಲೇಜಿನಿಂದ ಅಧ್ಯಾಪಕನನ್ನು ಹೊರಹಾಕಬೇಕು ಹಾಗೂ ಸೂಕ್ತ ಕಾನೂನು ಕ್ರಮಕೈಗೊಳ್ಳಲು ಆಗ್ರಹಿಸಿ ಬಿ.ಎಲ್.ಡಿ ಕಾಲೇಜು ಎದುರು ಪ್ರತಿಭಟನೆ ಸಹ ನಡೆಯುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.