ಸಿಎಂ ರಾಜೀನಾಮೆ ಪಡೆಯಲು ಜನರಿಂದಲೇ ಪ್ರತಿಭಟನೆ

Published : Nov 24, 2018, 06:01 PM ISTUpdated : Nov 24, 2018, 06:12 PM IST
ಸಿಎಂ ರಾಜೀನಾಮೆ ಪಡೆಯಲು ಜನರಿಂದಲೇ ಪ್ರತಿಭಟನೆ

ಸಾರಾಂಶ

ತೀವ್ರ ಅನಾರೋಗ್ಯಕ್ಕೆ ಗುರಿಯಾಗಿರುವ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ರಾಜೀನಾಮೆಗೆ ಒತ್ತಾಯಿಸಿ ರಾಜ್ಯದ ಜನರೇ ಪ್ರತಿಭಟನೆ ಆರಂಭಿಸಿದ್ದಾರೆ. ಮುಖ್ಯಮಂತ್ರಿ  ರಾಜೀನಾಮೆ ಪಡೆಯದ ರಾಜ್ಯಪಾಲೆ ಮೃದುಲ ಸಿನ್ಹಾ ಅವರ ವಿರುದ್ಧವೂ ಹೋರಾಟ ಮಾಡಲು ನಿರ್ಧರಿಸಿದ್ದಾರೆ.

ಪಣಜಿ[ನ.24]  ವಿರೋಧ ಪಕ್ಷದವರು ಅಧಿಕಾರದಲ್ಲಿ ಇರುವವರ ರಾಜೀನಾಮೆ ಕೇಳುವುದು ಸಾಮಾನ್ಯ. ಆದರೆ ಇಲ್ಲಿ ಜನರೇ ಸಿಎಂ ರಾಜೀನಾಮೆಗೆ ಆಗ್ರಹ ಮಾಡುತ್ತಿದ್ದಾರೆ.

ಗೋವಾ ಮುಖ್ಯಮಂತ್ರಿ  ಮನೋಹರ್ ಪರಿಕ್ಕರ್ ರಾಜೀನಾಮೆಗೆ ಒತ್ತಾಯಿಸಿ ನೂರಾರು ಗೋವಾ ನಾಗರಿಕರು ಕಳೆದ ಬುಧವಾರ ಸಿಎಂ ನಿವಾಸದವರೆಗ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು. ಈಗ ಮತ್ತೆ ಪ್ರತಿಭಟನೆ ತೀವ್ರಗೊಳಿಸಲು ನಿರ್ಧರಿಸಿದ್ದು, ಇದಕ್ಕೆ ಪ್ರತಿಪಕ್ಷ ಕಾಂಗ್ರೆಸ್, ಶಿವಸೇನಾ ಹಾಗೂ ಎನ್ ಸಿಪಿ ಸಹ ಬೆಂಬಲ ನೀಡಿದ್ದು ಹೋರಾಟ ತೀವ್ರವಾಘುವ ಲಕ್ಷಣ ಕಂಡುಬಂದಿದೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಸಿಎಂ ಪರಿಕ್ಕರ್ ಅವರು ಕಳೆದ 9 ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದ ಆಡಳಿತ ಸಂಪೂರ್ಣ ಸ್ಥಗಿತಗೊಂಡಿದೆ. ಇಂತಹ ಪರಿಸ್ಥಿತಿಯಲ್ಲ ಮಧ್ಯ ಪ್ರವೇಶಿಸಬೇಕಾದ ರಾಜ್ಯಪಾಲರು ಯಾವುದೆ ಪರ್ಯಾಯ ಆಲೋಚನೆ ಮಾಡುತ್ತಿಲ್ಲ ಎಂದು ನಾಗರಿಕ ಆಂದೋಲನದ ಮುಖಂಡ ಐರೀಸ್ ರೋಡ್ರಿಗಸ್  ಆರೋಪಿಸಿದ್ದಾರೆ.

ಇನ್ನೊಂದು ಕಡೆ  ಮುಖ್ಯಮಂತ್ರಿ ಪರಿಕ್ಕರ್ ರಾಜೀನಾಮೆಗೆ ಒತ್ತಾಯಿಸಿ ಆರ್ ಟಿಐ ಕಾರ್ಯಕರ್ತ ರಾಜನ್ ಘಾಟೆ ಅವರು ಕಳೆದ ಎಂಟು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.  ಪರಿಕ್ಕರ್ ರಾಜೀನಾಮೆ ನೀಡಲು ಸಿದ್ಧವಾಗಿದ್ದರೂ ಬಿಜೆಪಿ ನಾಯಕರೇ ತಡೆಯುತ್ತಿದ್ದಾರೆ ಎಂಬ ಮಾತು ಕೇಳಿ ಬಂದಿದೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಘಾನಾ ಪ್ರವಾದಿಯ ಅಸಲಿ ಮುಖ ಬಯಲು: ಪ್ರವಾಹ ಆಗುತ್ತೆ ಅಂತ ಜನರ ದಾರಿ ತಪ್ಪಿಸಿದ ಪ್ರವಾದಿಯ ಬಂಧನ
ಹೆತ್ತವರ ಪ್ರೀತಿಗಾಗಿ ಹಪಹಪಿಸಿ ಕೊನೆಯುಸಿರೆಳೆದ ಮಗಳು: ತಂದೆ-ತಾಯಿ ಜಗಳದಲ್ಲಿ ಕೂಸು ಬೇಡವಾಯ್ತು!