
ಬೆಳಗಾವಿ (ಡಿ.01): ರಾಜ್ಯ ಸರ್ಕಾರವೇ ಘೋಷಿಸಿರುವ ಹೊಸ 43 ತಾಲೂಕುಗಳಿಗೆ ಶೀಘ್ರವೇ ಅನುಮೋದನೆ ನೀಡಬೇಕೆಂದು ಆಗ್ರಹಿಸಿ ಘೋಷಿತ 43 ತಾಲೂಕುಗಳ ರಾಜ್ಯ ಹೋರಾಟ ಸಮಿತಿ ಬೆಳಗಾವಿಯ ಸುವರ್ಣ ಸೌಧ ಹೊರಗೆ ಪ್ರತಿಭಟನೆ ನಡೆಸಿತು.
2013-14ನೇ ಸಾಲಿನಲ್ಲಿ ಹೊಸ ತಾಲೂಕು ಘೋಷಿಸಿ 2 ಕೋಟಿ ಅನುದಾನ ಸಹ ನೀಡಲಾಗಿತ್ತು. ಆದರೆ ಪ್ರಸಕ್ತ ಹೊಸ ತಾಲೂಕುಗಳಿಗೆ ಅನುಮೋದನೆ ನೀಡುತ್ತಿಲ್ಲ. ಇದರಿಂದ 43 ತಾಲೂಕಿನ ಜನರು ತೀವ್ರ ಸಮಸ್ಯೆ ಎದುರಿಸುವಂತಾಗಿದೆ. ರಾಜಕೀಯ ಇಚ್ಛಾಶಕ್ತಿಯ ಕೊರತೆಯೇ ಈ ಸಮಸ್ಯೆ ಪಮುಖ ಕಾರಣವಾಗಿದೆ. ಏಕಕಾಲದಲ್ಲಿ 43 ತಾಲೂಕುಗಳನ್ನು ಅನುಮೋದನೆ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.