
ಹಾಂಗ್ಕಾಂಗ್[ಜು.02]: ಕ್ರಿಮಿನಲ್ ಪ್ರಕರಣಗಳ ಆರೋಪಿಗಳನ್ನು ಚೀನಾ ಮುಖ್ಯಭೂಮಿಗೆ ಗಡಿಪಾರು ಮಾಡುವ ವಿವಾದಿತ ಮಸೂದೆ ವಿರೋಧಿಸಿ ಕಳೆದ ಮೂರು ವಾರಗಳಿಂದ ಹಾಂಗ್ಕಾಂಗ್ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಸೋಮವಾರ ಭಾರೀ ಹಿಂಸಾಚಾರ ನಡೆದಿದೆ.
ಪ್ರಸ್ತಾವಿತ ಮಸೂದೆ ವಿರೋಧಿಸುತ್ತಿರುವ ಪ್ರಜಾಪ್ರಭುತ್ವ ಪರ ಹೋರಾಟಗಾರರು, ಹಾಂಗ್ಕಾಂಗ್ ಬ್ರಿಟನ್ನಿಂದ ಚೀನಾಕ್ಕೆ ಸೇರ್ಪಡೆಗೊಂಡ 22ನೇ ವರ್ಷಾಚರಣೆ ದಿನವಾದ ಸೋಮವಾರ ಸಂಸತ್ತಿನ ಮೇಲೆ ದಾಳಿ ನಡೆಸಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿದ್ದ ಪ್ರತಿಭಟನಾಕಾರರು, ಸಂಸತ್ ಆವರಣದೊಳಗೆ ಪ್ರವೇಶಿಸಿ ಗಾಜಿನ ತಡೆಗೋಡೆಗಳನ್ನು ಧ್ವಂಸಗೊಳಿಸಿದ್ದಾರೆ. ಅಲ್ಲದೆ ಸಂಸತ್ತಿನಲ್ಲಿಡಲಾಗಿದ್ದ ಹಲವು ಮಹನೀಯರ ಫೋಟೋಗಳನ್ನು ಕಿತ್ತುಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಪ್ರತಿಭಟನಾಕಾರರು ತಟಸ್ಥರಾಗದಿದ್ದರೆ, ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂಬ ಪೊಲೀಸರ ಮನವಿಗೂ ಉದ್ರಿಕ್ತರ ಕಿವಿಗೊಡಲಿಲ್ಲ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.