
ಮಂಡ್ಯ (ಸೆ.30): ಸುಪ್ರೀಂ ಕೋರ್ಟ್ ಆದೇಶ ಹೊರ ಬರುತ್ತಿದ್ದಂತೆಯೇ ಕಾವೇರಿ ಕೊಳ್ಳದಲ್ಲಿ ಪ್ರತಿಭಟನೆಗಳು ಆರಂಭಗೊಂಡಿವೆ.
ಮಂಡ್ಯದಲ್ಲಿ ಪ್ರತಿಭಟನೆಗಳು ಭುಗಿಲೆದಿದ್ದು, ಸುಪ್ರೀಂ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆಗೆ ವಿರೋಧ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು ಇದೊಂದು ಮರಣ ಶಾಸನ, ಮುಂದಿನ ದಿನಗಳಲ್ಲಿ ನಮಗೆ ನೀರು ಸಿಗಲ್ಲ. ಎಂದು ಘೋಷಣೆ ಕೂಗಿದ್ದಾರೆ.
ಮಂಡ್ಯ ಜನರು ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಈಗಾಗಲೇ ಕಾವೇರಿ ಕೊಳ್ಳದಲ್ಲಿನ ರೈತರ ಬೆಳೆಗಳು ಒಣಗಿ ಹೋಗುತ್ತಿವೆ. ಬೆಳೆಗಳಿಗೆ ನೀರು ನಿಲ್ಲಿಸಿ 15 ದಿನಗಳಾಗಿದ್ದು, ಇನ್ನೊಂದು ವಾರದಲ್ಲಿ ನೀರು ಸಿಗದಿದ್ದಲ್ಲಿ, ಬೆಳೆಗಳು ಸಂಪೂರ್ಣ ಒಣಗಿ ಹೋಗುದಂತೂ ಖಚಿತ. ಇನ್ನೂ ನಮಗೆ ಬೊಗಸೆ ನೀರೇ ಗತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
(ಸಾಂದ್ರಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.