
ಬೆಳಗಾವಿ (ಮಾ.19): ಬಾರ್ ಮ್ಯಾನೇಜರ್ ಮೇಲೆ ಪಿಎಸ್'ಐ ಯದ್ವಾತದ್ವಾ ಹಲ್ಲೆ ನಡೆಸಿ ದರ್ಪ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖಾ ತನಿಖೆಗೆ ಎಸ್ಪಿ ರವಿಕಾಂತೇಗೌಡ ಆದೇಶಿಸಿದ್ದಾರೆ.
ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಕುಡಚಿ ಪಿಎಸ್ಐ ಶಿವಶಂಕರ ಮುಕರಿಯ ದರ್ಪ ಬಯಲಾಗಿದೆ. ಮಾಮೂಲಿ ಕೊಡಲಿಲ್ಲ ಎಂಬ ಕಾರಣಕ್ಕೆ ಪಿಎಸ್ಐ ಹಲ್ಲೆ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯಲಿದೆ.
ಮಾರ್ಚ್ 13 ರಂದು ಬೆಳಗಾವಿಯಲ್ಲಿ ಹೋಳಿ ಹಬ್ಬದ ಪ್ರಯುಕ್ತ ಮದ್ಯ ನಿಷೇಧ ಇತ್ತು. ಅಂದು ರಾತ್ರಿ ಕುಡಚಿಯ ಶಿವಶಕ್ತಿ ಬಾರ್'ಗೆ ನುಗ್ಗಿದ ಪಿಎಸ್'ಐ ಶಿವಶಂಕರ, ಪೇದೆಗಳಾದ ಪೂಜಾರಿ, ಎಚ್.ಡಿ ಬೋಜನ್ನವರ್, ಮ್ಯಾನೇಜರ್ ಅಜಿತ್ ಎಂಬವರ ಮೇಲೆ ಹಲ್ಲೆ ಮಾಡಿದ್ದಾರೆ.
ನಿಷೇಧ ಇದ್ದರೂ ಮದ್ಯ ಹಾಗೂ ಮಾಮೂಲಿ ನೀಡುವಂತೆ ಕೇಳಿದ್ದಾರೆ. ಆದರೆ ಮದ್ಯ ನೀಡಲು ನಿರಾಕರಿಸಿದ್ದರಿಂದ ಪಿಎಸ್'ಐ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.