
ಹೂವಿನಹಡಗಲಿ: ‘ಇನ್ ಒಂದು ಮಾತಾಡದ್ರ ಬಾಯಾಗ್ ಬೂಟ್ ಇಡ್ತೀನಿ, ಮಾತ್ ಬೇಡಾ ನಡಿ, ಅಭಿವೃದ್ಧಿ ಮಾಡಕಾ ನಾವು ಬೇಕು, ಓಟ ಮಾತ್ರ ಇನ್ನೊಬ್ಬರಿಗೆ ಹಾಕುತ್ತೀರಿ’ ಎಂದು ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ ಬಿಜೆಪಿ ಕಾರ್ಯಕರ್ತರನ್ನು ನಿಂದಿಸಿರುವ ಘಟನೆ ಬುಧವಾರ ನಡೆದಿದೆ.
ತಾಲೂಕಿನ ಮೈಲಾರ ಗ್ರಾಮ ದಲ್ಲಿ ನೂತನ ಗ್ರಾ.ಪಂ. ಕಟ್ಟಡ ಶಂಕುಸ್ಥಾಪನೆ ವೇಳೆ ಈ ಘಟನೆ ನಡೆದಿದೆ. ಓಟು ಹಾಕಿ ದವರು ಮುಂದಕ್ಕೆ ಬನ್ನಿ ಎಂದು ಶಾಸಕರು ಕರೆದ ವೇಳೆ ಗಲಾಟೆಯಾಗಿದೆ.
ಈ ಹಿಂದೆಯೂ ಕೂಡ ಇಂತಹ ಅನೇಕ ಘಟನೆಗಳು ನಡೆದಿದ್ದು ಇದೀಗ ಮತ್ತೊಮ್ಮೆ ಪರಮೇಶ್ವರ್ ನಾಯಕ್ ಅವರು ನಿಂದಿಸಿರುವ ಘಟನೆ ಬೆಳಕಿಗೆ ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.