ಪೊಲೀಸರಿಂದ ಥಳಿತ: ಪಿಯು ವಿದ್ಯಾರ್ಥಿ ಆತ್ಮಹತ್ಯೆ

Published : Oct 14, 2017, 05:54 PM ISTUpdated : Apr 11, 2018, 12:51 PM IST
ಪೊಲೀಸರಿಂದ ಥಳಿತ: ಪಿಯು ವಿದ್ಯಾರ್ಥಿ ಆತ್ಮಹತ್ಯೆ

ಸಾರಾಂಶ

ಪೊಲೀಸರ ವಿಚಾರಣೆಗೆ ಒಳಗಾಗಿದ್ದ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಐಜೂರಿನ ಗೀತಾಮಂದಿರ ಬಡಾವಣೆಯಲ್ಲಿ ಶುಕ್ರವಾರ ನಡೆದಿದೆ. ಬಡಾವಣೆ ವಾಸಿ ಗೀತಮ್ಮ ಪುತ್ರ ವೆಂಕಟೇಶ್ (17) ಮೃತ ವಿದ್ಯಾರ್ಥಿ. ಈತ ತನ್ನ ಮನೆಯಲ್ಲಿಯೇ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ರಾಮನಗರ: ಪೊಲೀಸರ ವಿಚಾರಣೆಗೆ ಒಳಗಾಗಿದ್ದ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಐಜೂರಿನ ಗೀತಾಮಂದಿರ ಬಡಾವಣೆಯಲ್ಲಿ ಶುಕ್ರವಾರ ನಡೆದಿದೆ. ಬಡಾವಣೆ ವಾಸಿ ಗೀತಮ್ಮ ಪುತ್ರ ವೆಂಕಟೇಶ್ (17) ಮೃತ ವಿದ್ಯಾರ್ಥಿ. ಈತ ತನ್ನ ಮನೆಯಲ್ಲಿಯೇ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಘಟನೆ ವಿವರ: ಆತ್ಮಹತ್ಯೆ ಮಾಡಿಕೊಂಡ ವೆಂಕಟೇಶ್‌ನ ತಂದೆ ಹನುಮಂತರಾಯಪ್ಪ ಮೃತಪಟ್ಟಿದ್ದು, ಕುಟುಂಬದ ಜವಾಬ್ದಾರಿಯನ್ನು ವೆಂಕಟೇಶ್ ಹೊತ್ತಿದ್ದನು. ಚನ್ನಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡಿಕೊಂಡು, ಬಿಡುವಿನ ಸಮಯದಲ್ಲಿ ಕೆಲಸ ಮಾಡಿಕೊಂಡು ಮನೆ ಮತ್ತು ತನ್ನ ಓದಿನ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದನು.

ಮೂರು ದಿನಗಳ ಹಿಂದೆ ವೆಂಕಟೇಶ್, ಈತನ ತಾಯಿ ಸೇರಿದಂತೆ ಇತರರು ಹಣ ನೀಡಬೇಕೆಂದು ಸೋದರ ಸಂಬಂಧಿಗಳಾದ ಮಾಗಡಿ ಮಾರಣ್ಣ ಮತ್ತು ಮಾರಕ್ಕ ಎನ್ನುವವರು ಎಂದು ಐಜೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ದೂರಿನ ಹಿನ್ನಲೆಯಲ್ಲಿ ವೆಂಕಟೇಶ್, ಇವರ ತಾಯಿ ಗೀತಮ್ಮ ಇತರರು ಠಾಣೆಗೆ ಹೋಗಿದ್ದಾರೆ. ಈ ವೇಳೆ ಪೊಲೀಸರು ವೆಂಕಟೇಶ್‌ನನ್ನು ಥಳಿಸಿದ್ದಾರೆ. ಇದರಿಂದ ಮನನೊಂದ ವೆಂಕಟೇಶ್ ಬೆಳಿಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಸಂಬಂಧ ಐಜೂರು ಪೊಲೀಸ್ ಠಾಣೆಯಲ್ಲಿ ಮಾಗಡಿ ಮಾರಣ್ಣ ಮತ್ತು ಮಾರಕ್ಕ ವಿರುದ್ಧ ಮೃತ ವೆಂಕಟೇಶ್ ಕುಟುಂಬಸ್ಥರು ದೂರು ನೀಡಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಾಳಿ ಕಟ್ಟುವ ಶುಭ ವೇಳೆ..., 'ಇವನು ನನ್ನ ಗಂಡ' ಎಂದವಳೊಂದಿಗೆ ಸಂಸಾರ ನಡೆಸುತ್ತೇನೆ ಎಂದ ಮದುಮಗ!
ಬೆಂಗಳೂರು ಜನತೆಗೆ ಶೀಘ್ರವೇ ದೊಡ್ಡ ಮುಕ್ತಿ, ನಗರದ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಮುಂದಿನ ತಿಂಗಳೊಳಗೆ ಸಂಚಾರ ಮುಕ್ತ!