
ಬೀದರ್(ನ.19): ದ್ವಿಚಕ್ರ ವಾಹನ ಸವಾರರಿಗೆ ದಾಖಲೆ ಪರಿಶೀಲನೆ ಮಾಡದೇ ದಂಡ ವಿಧಿಸುತ್ತಿದ್ದ ಟ್ರಾಫಿಕ್ ಪೊಲೀಸ್'ನವರಿಗೆ ಸಾರ್ವಜನಿಕರೇ ಗೂಸಾ ಕೊಟ್ಟ ಘಟನೆ ನಗರದ ಮೈಲೂರು ಕ್ರಾಸ್ ಬಳಿ ನಡೆದಿದೆ.
ವಾಹನ ತಪಾಸಣೆ ಮಾಡುವ ವೇಳೆ ಸಾರ್ವಜನಿಕರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ವಾಗ್ವಾದ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರ ವಿರುದ್ಧ ತಿರುಗಿಬಿದ್ದ ಸಾರ್ವಜನಿಕರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ.
ಈ ವೇಳೆ ಸಾರ್ವಜನಿಕರನ್ನು ನಿಯಂತ್ರಿಸುವ ಸಲುವಾಗಿ ಪೊಲೀಸರು ಸಾರ್ವಜನಿಕರಿಗೆ ಲಾಠಿ ರುಚಿ ತೋರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.