
ನವದೆಹಲಿ (ಅ.26): ಸಾರ್ವಜನಿಕವಾಗಿ ಮದ್ಯ ಸೇವನೆ ಹಾಗೂ ಇತರರಿಗೆ ತೊಂದರೆ ನೀಡುವುದರ ವಿರುದ್ಧ ದೆಹಲಿ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿದೆ.
ಇಂದು ನಡೆದ ಅಬಕಾರಿ ಇಲಾಖೆಯ ಉನ್ನತ ಮಟ್ಟದ ಸಭೆಯಲ್ಲಿ ‘ಅಬಕಾರಿ ಕಾಯ್ದೆ’ಯನ್ನು ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಹಾಗೂ ದಂಡ ವಿಧಿಸಲು ದೆಹಲಿ ಉಪ-ಮುಖ್ಯಮಂತ್ರಿ ಮನೀಶ್ ಸಿಸೋದಿಯಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸಾರ್ವಜನಿಕವಾಗಿ ಮದ್ಯ ಸೇವಿಸುವ ಹಾಗೂ ಜನರಿಗೆ ತೊಂದರೆಯನ್ನುಂಟು ಮಾಡುವುದರ ವಿರುದ್ಧ ಜಾಗೃತಿಯನ್ನು ಹಮ್ಮಿಕೊಳ್ಳಲಾಗುವುದು. ನವಂಬರ್ 7 ಬಳಿಕ ನಿಯಮವನ್ನು ಉಲ್ಲಂಘಿಸುವವರಿಗೆ ರೂ.5 ಸಾವಿರ ದಂಡ, ಹಾಗೂ ಸಾರ್ವಜನಿಕರಿಗೆ ತೊಂದರೆ ಕೊಡುವವರಿಗೆ ರೂ.10 ಸಾವಿರ ದಂಡ ವಿಧಿಸಲಾಗುವುದು ಮತ್ತು ಬಂಧಿಸಲಾಗುವುದು ಎಂದು ಸಿಸೋದಿಯಾ ತಿಳಿಸಿದ್ದಾರೆ.
ಜತೆಗೆ ಅಧಿಕಾರಿಗಳ ತಂಡವು ಮದ್ಯದಂಗಡಿಗಳನ್ನು ಕೂಡಾ ಪರಿಶೀಲಿಸಲಿದೆ; ಅವುಗಳ ಅನುಮತಿ ನವೀಕರಣಕೊಂಡಿದೆಯೇ, ಅವುಗಳು ಸರ್ಕಾರ ಸೂಚಿಸಿರುವಂತೆ ಸಿಸಿಟಿವಿಗಳನ್ನು ಅಳವಡಿಸಿದೆಯೇ ಎಂದೂ ಕೂಡಾ ಪರಿಶೀಲಿಸಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.