
ಬೆಂಗಳೂರು (ಏ. 06): ಏಪ್ರಿಲ್ ಕೊನೆಯ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಲಿದೆ ಎಂದು ತನ್ವೀರ್ ಸೇಠ್ ಹೇಳಿದ್ದಾರೆ.
ಇಂದು ಸುದ್ದಿಗೋಷ್ಟಿಯಲ್ಲಿ ತನ್ವೀರ್ ಸೇಠ್ ಮಾತನಾಡುತ್ತಾ, ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಗಿದಿದೆ. ಪರೀಕ್ಷಾ ಸುಧಾರಣಾ ಕ್ರಮ ತೃಪ್ತಿ ತಂದಿದೆ. 33 ವಿಷಯಗಳಲ್ಲಿ ಪರೀಕ್ಷೆ ನಡೆದಿದೆ. ಮುಂದಿನ ವರ್ಷದಿಂದ ಪರೀಕ್ಷಾ ಮಂಡಳಿಯೇ ಪೂರಕ ಪರೀಕ್ಷೆ ನಡೆಸಲಿದೆ ಎಂದಿದ್ದಾರೆ.
Scheme evaluation ಕಳೆದ ವರ್ಷದಿಂದ ಆರಂಭವಾಗಿದೆ. ಈ ವರ್ಷ 2.73ರಷ್ಟು ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. 2817 ಪರೀಕ್ಷಾ ಕೇಂದ್ರಗಳ್ಲಿ 51 ವಿದ್ಯಾರ್ಥಿಗಳು ಡಿಬಾರ್ ಆಗಿದ್ದಾರೆ. ಇಂಟರ್’ನೆಟ್’ನಲ್ಲಿ 8ನೇ ತಾರೀಖು ಕೀ ಉತ್ತರ ಹಾಕಲಾಗುತ್ತದೆ. ಆಕ್ಷೇಪಣೆ ಗೆ ಮೇ 8 ರಿಂದ 10ರವರೆಗೆ ಅವಕಾಶ ನೀಡಲಾಗಿದೆ. ಮೌಲ್ಯಮಾಪನ ಇದೇ ತಿಂಗಳ 16 ರಿಂದ 25ರವರೆಗೆ ನಡೆಯುತ್ತದೆ. ಮೇ ಮೊದಲ ವಾರ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.