ಮೇಕೆದಾಟು ಯೋಜನೆಗೆ ಮತ್ತೊಂದು ರಾಜ್ಯದಿಂದಲೂ ವಿರೋಧ..!

Kannadaprabha News   | Asianet News
Published : Jul 15, 2021, 08:10 AM IST
ಮೇಕೆದಾಟು ಯೋಜನೆಗೆ ಮತ್ತೊಂದು ರಾಜ್ಯದಿಂದಲೂ ವಿರೋಧ..!

ಸಾರಾಂಶ

* ಪ್ರಧಾನಿ ಮೋದಿಗೆ ದೂರಲು ನಿರ್ಧಾರ * ಯೋಜನೆಗೆ ತಡೆಯೊಡ್ಡುವಂತೆ ಮನವಿ  * ಪುದುಚೇರಿ ಕೂಡ ಕಾವೇರಿ ಕಣಿವೆ ರಾಜ್ಯ   

ಪುದುಚೇರಿ(ಜು.15): ತಮಿಳುನಾಡು ಬಳಿಕ ಪುದುಚೇರಿ ಸಹ ಕರ್ನಾಟಕ ಸರ್ಕಾರ ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಬಳಿ ನಿರ್ಮಿಸಲು ಹೊರಟಿರುವ ಅಣೆಕಟ್ಟೆಗೆ ವಿರೋಧ ವ್ಯಕ್ತಪಡಿಸಿ, ಈ ವಿಷಯವನ್ನು ಕೇಂದ್ರದ ಬಳಿ ಕೊಂಡೊಯ್ಯಲು ನಿರ್ಧರಿಸಿದೆ. 

ಬುಧವಾರ ಮುಖ್ಯಮಂತ್ರಿ ಎನ್‌.ರಂಗಸಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ. ಅಲ್ಲದೆ ಈ ಸಂಬಂಧ ಶೀಘ್ರವೇ ಪ್ರಧಾನಿ ಮೋದಿ, ಕೇಂದ್ರ ಜಲ ಸಚಿವ ಗಜೇಂದ್ರ ಶೆಖಾವತ್‌ ಅವರಿಗೆ ಪತ್ರ ಬರೆದು ಮಧ್ಯಪ್ರವೇಶಕ್ಕೆ ಒತ್ತಾಯಿಸಲಿದ್ದಾರೆ. ಹಾಗೂ 9000 ಕೋಟಿ ವೆಚ್ಚದ ಯೋಜನೆಗೆ ತಡೆಯೊಡ್ಡುವಂತೆ ಮನವಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪುದುಚೇರಿ ಕೂಡ ಕಾವೇರಿ ಕಣಿವೆ ರಾಜ್ಯವಾಗಿದ್ದು, ಕಾರೈಕಲ್‌ ಪ್ರದೇಶವು ಕಾವೇರಿ ಮೇಲೆ ಅವಲಂಬಿಸಿದೆ.

ಕರ್ನಾಟಕದ ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸರ್ವಪಕ್ಷ ಸಭೆಯಲ್ಲಿ ಮಹತ್ವದ 3 ನಿರ್ಧಾರ!

ಆದರೆ ಪ್ರಸ್ತಾಪಿತ ಯೋಜನೆಯಿಂದ ನೆರೆಯ ರಾಜ್ಯಗಳಿಗೆ ಯಾವುದೇ ಹಾನಿ ಇಲ್ಲ ಎಂದು ಕರ್ನಾಟಕ ಸರ್ಕಾರ ಈಗಾಗಲೇ ಹೇಳಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಡಿಯೋ: ಅಂತರರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನಕ್ಕೆ ಅವಮಾನ: ಶಹಬಾಜ್ ಷರೀಫ್‌ರನ್ನು ನಿರ್ಲಕ್ಷಿಸಿದ ಪುಟಿನ್!
ಯುಎಇ ಕಠಿಣ ಕಾನೂನು: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ವೇಶ್ಯಾವಾಟಿಕೆಗೆ ಶಿಕ್ಷೆ ಪ್ರಮಾಣ ಭಾರೀ ಹೆಚ್ಚಳ!