ಹುತಾತ್ಮ ಯೋಧರ ಕುಟುಂಬಗಳ ನೆರವಿಗೆ ಬಂದ ಇನ್ಫೋಸಿಸ್​ ಫೌಂಡೇಶನ್

Published : Feb 17, 2019, 03:16 PM IST
ಹುತಾತ್ಮ ಯೋಧರ ಕುಟುಂಬಗಳ ನೆರವಿಗೆ ಬಂದ ಇನ್ಫೋಸಿಸ್​ ಫೌಂಡೇಶನ್

ಸಾರಾಂಶ

ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ  ಯೋಧರ ಕುಟುಂಬಕ್ಕೆ ದೇಶಾದ್ಯಂತ ಸಾರ್ವಜನಿಕರು ಕಂಬನಿ ಮಿಡಿದಿದ್ದು, ಇನ್ಫೋಸಿಸ್ ಫೌಂಡೇಶನ್ ವತಿಯಿಂದಲೂ ಎಲ್ಲಾ ಯೋಧರ ಕುಟುಂಬಗಳಿಗೆ ನೆರವು ನೀಡಲು ಮುಂದಾಗಿದೆ. 

ಬೆಂಗಳೂರು, (ಫೆ.17): ಪುಲ್ವಾಮಾ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಪ್ರತಿ ಯೋಧರ ಕುಟುಂಬಕ್ಕೆ ತಲಾ 10 ಲಕ್ಷ ರು. ದೇಣಿಗೆ ನಿಡುವುದಾಗಿ ಇನ್ಫೋಸಿಸ್​ ಫೌಂಡೇಶನ್ ಘೊಷಿಸಿದೆ. 

ತಮ್ಮ ಸಂಸ್ಥೆಯ ವತಿಯಿಂದ ಯೋಧರ ಕುಟುಂಬಕ್ಕೆ ತಲಾ 10  ಲಕ್ಷ ರೂ. ಆರ್ಥಿಕ ನೆರವು ನೀಡುವುದಾಗಿ ಇನ್ಫೋಸಿಸ್ ಫೌಂಡೇಶನ್ ಸಂಸ್ಥೆಯ ಮುಖ್ಯಸ್ಥೆ ಸುಧಾಮೂರ್ತಿ ಹೇಳಿದ್ದಾರೆ.

ಮಲೇಷ್ಯಾದಿಂದಲೇ ಹುತಾತ್ಮ ಗುರು ಕುಟುಂಬಕ್ಕೆ ಜಮೀನು ನೆರವು ಘೋಷಿಸಿದ ಸುಮಲತಾ ಅಂಬರೀಶ್

'ದೇಶಕ್ಕಾಗಿ ಯೋಧರು ಬಲಿಯಾಗಿದ್ದಾರೆ. ಪತ್ರಿಕೆಯಲ್ಲಿ ಓದಿದ ದಿನವೇ ಹಣ ಕೊಡಬೇಕೆಂದುಕೊಂಡೆ. ಹಣ ಮುಖ್ಯವಲ್ಲ, ಯೋಧರ ಜೀವ ಹೋಗಿದೆ. ಅದಕ್ಕೆ ನೋವಿದೆ. ನಮ್ಮ ಸಂಸ್ಥೆಯ ವತಿಯಿಂದ ಹುತಾತ್ಮ ಯೋಧರ ಕುಟುಂಬಕ್ಕೆ ಆರ್ಥಿಕ ನೆರವು ನೀಡಬೇಕೆಂದು ನಿರ್ಧರಿಸಿದ್ದೇವೆ' ಎಂದು ಹೇಳಿದರು.

'ಮಂಡ್ಯದ ವೀರ ಯೋಧ ಗುರು ಹುಟ್ಟೂರಿಗೆ ಹೋಗಿ ಕುಟುಂಬಸ್ಥರಿಗೆ ಸಾಂತ್ವನ ಹೇಳುತ್ತೇನೆ. ಗುರು ಪತ್ನಿ ಕಲಾವತಿ ಮನೆಗೆ ಮಾರ್ಚ್​ 15 ರ ನಂತರ ತೆರಳುತ್ತೇನೆ. 

ರಾಷ್ಟ್ರಕ್ಕಾಗಿ ಬಲಿದಾನವಾದವರ ಹಿಂದೆ ನಾವಿದ್ದೇವೆ. ನನಗೆ ದುಡ್ಡು ಕೊಟ್ಟೆ ಎನ್ನುವ ಪ್ರಚಾರ ಬೇಕಿಲ್ಲ. ಈ ಪ್ರೇರಣೆಯಿಂದ ಬೇರೆಯವರು ಸಹಾಯ ಹಸ್ತ ನೀಡುತ್ತಾರೆ. ಹೀಗಾಗಿ ಹುತಾತ್ಮ ಯೋಧರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ನೀಡುತ್ತಿದ್ದೇವೆ' ಎಂದರು.

ಮತ್ತೊಂದೆಡೆ ಯೋಧರ ಮಕ್ಕಳ ವಿದ್ಯಾಭ್ಯಾಸ ಖರ್ಚು ವೆಚ್ಚದ ಜವಾಬ್ದಾರಿ ವಹಿಸಿಕೊಳ್ಳುವುದಾಗಿ ಕ್ರಿಕೆಟರ್ ವಿರೇಂದ್ರ ಸೆಹ್ವಾಗ್ ಹಾಗೂ ರಿಲಾನ್ಸ್ ಹೇಳಿದೆ.

ಇನ್ನು ಮಂಡ್ಯದ ಗಂಡುಗಲಿ ಎಚ್. ಗುರು ಅವರ ಕುಟುಂಬಕ್ಕೆ ಅರ್ಧ ಎಕರೆ ಜಮೀನು ನೀಡುವುದಾಗಿ ಸುಮಲತಾ ಅಂಬರೀಶ್ ಘೋಷಿಸಿದ್ದಾರೆ.

ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಫೆ.14ರಂದು ಪಾಕ್ ಮೂಲದ ಜೈಷ್-ಇ-ಮೊಹಮ್ಮದ್ ಸಂಘಟನೆಗೆ ಸೇರಿದ ಉಗ್ರ ಸ್ಫೋಟಕ ತುಂಬಿದ ಕಾರನ್ನು ಯೋಧರು ತೆರಳುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆಸಿ ಭೀಕರ ಸ್ಫೋಟ ಸಂಭವಿಸಿತ್ತು. ಇದರಿಂದ 44  ಯೊಧರು ಹುತಾತ್ಮರಾಗಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸೋಮೇಶ್ವರ ಬೀಚ್‌ ಈಗ ಇನ್ನಷ್ಟು ಸ್ವಚ್ಛ- ಸುಂದರ!
ವರದಾ-ಬೇಡ್ತಿ ನದಿ ಜೋಡಣೆ: ಭುಗಿಲೆದ್ದ ಜಲ ಸಂಘರ್ಷ, ಪರವಾಗಿ ನಿಂತ ಬಸವರಾಜ್ ಬೊಮ್ಮಾಯಿ