
ಶ್ರೀನಗರ : ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ 44 ಯೋಧರು ವೀರಮರಣವನ್ನಪ್ಪಿದ್ದು, ಇಡೀ ದೇಶವೇ ಕಂಬನಿ ಮಿಡಿಯುತ್ತಿದ್ದು, ಇದಕ್ಕೆ ಕಾರಣನಾದ ಉಗ್ರ ಆದಿಲ್ ಅಹಮದ್ ದಾರ್ ತಂದೆ ಕೂಡ ಘಟನೆಗೆ ವಿಷಾಧಿಸಿದ್ದಾರೆ.
ಅಲ್ಲದೇ ತಮ್ಮ ಮಗನ ಸಾವಿಗೂ ನೋವಿದೆ. ಆದರೆ ಇಲ್ಲಿ 44 ಯೋಧರು ಹುತಾತ್ಮರಾಗಿದ್ದಕ್ಕೂ ಕೂಡ ಅಷ್ಟೇ ನೋವು ತಮ್ಮನ್ನು ಕಾಡುತ್ತಿದೆ ಎಂದು ಹೇಳಿದ್ದಾರೆ.
ಯಾವುದೇ ದಾಖಲೆ ಕೇಳದೆ ಹುತಾತ್ಮ ಯೋಧನ ಹಣ ನೀಡಿದ LIC
ಕೆಲ ವರ್ಷಗಳ ಹಿಂದೆ ದಾರ್ ಸೇನೆಯಿಂದ ಥಳಿಸಲ್ಪಟ್ಟಿದ್ದು, ಬಳಿಕ ಆತ ರೊಚ್ಚಿಗೆದ್ದು ಉಗ್ರನಾದ. ಕಾಶ್ಮೀರ ಸಮಸ್ಯೆ ಬಗೆಹರಿಯುವವರೆಗೂ ಕೂಡ ಇಂತಹ ಸಮಸ್ಯೆಗಳು ಮುಂದುವರಿಯುತ್ತಲೇ ಇರುತ್ತದೆ. ಆದ್ದರಿಂದ ಈ ಬಗ್ಗೆ ಭಾರತ ಸರ್ಕಾರ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದಿದ್ದಾರೆ.
ಈತ 2016ರಲ್ಲಿ ಗೆಳೆಯನ ಜೊತೆಗೆ ಶಾಲೆಯಿಂದ ಮನೆಗೆ ಮರಳುತ್ತಿದ್ದ. ಏಕಾಏಕಿ ಪೊಲೀಸರು ಈತನನ್ನು ತಡೆದು ಥಳಿಸಿದ್ದರು. ಕಲ್ಲು ತೂರಾಟದ ಆರೋಪದಲ್ಲಿ ಈತನ ಮೇಲೆ ಹಲ್ಲೆ ನಡೆದಿತ್ತು ಎಂದಿದ್ದಾರೆ.
ಪುಲ್ವಾಮ ದಾಳಿ : ದಶಕದಲ್ಲೇ ಮೊದಲು ಇಂತಹ ಸ್ಫೋಟಕ ಬಳಕೆ
ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಜೈಷ್ ಇ ಮೊಹಮದ್ ಗೆ ಸೇರಿದ 20 ವರ್ಷದ ಆದಿಲ್ ಅಹಮದ್ ದರ್ ಸ್ಫೋಟಕ ತುಂಬಿದ ಕಾರನ್ನು ಸೈನಿಕರು ತೆರಳುತ್ತಿದ್ದ ಬಸ್ ಡಿಕ್ಕಿ ಹೊಡೆಸಿದ್ದು, ಭೀಕರ ಸ್ಫೋಟದಲ್ಲಿ 44 ಯೋಧರು ಹುತಾತ್ಮರಾಗಿದ್ದರು.
ಇದೊಂದು ದಶಕದಲ್ಲೇ ನಡೆದ ಅತ್ಯಂತ ಘೋರ ಘಟನೆಯಾಗಿದೆ. ಇನ್ನೇನು ಲೋಕಸಭಾ ಚುನಾವಣೆಗೆ ತಿಂಗಳು ಬಾಕಿ ಇರುವಾಗಲೇ ಈ ದುರಂತ ಸಂಭವಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ