
ನವದೆಹಲಿ : ಪುಲ್ವಾಮದಲ್ಲಿ ಭೀಕರ ಉಗ್ರ ದಾಳಿ ನಡೆದು 44 ಯೋಧರು ಹುತಾತ್ಮರಾದ ಬೆನ್ನಲ್ಲೇ ಇದೀಗ CRPF ಭದ್ರತೆಯನ್ನು ಉನ್ನತೀಕರಿಸಲು ನಿರ್ಧರಿಸಿದೆ.
CRPF ಪಡೆಯ ನಿರ್ವಹಣಾ ವ್ಯವಸ್ಥೆಯನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಹೊಸ ರೀತಿಯ ನೀತಿ ನಿಯಮಗಳು ಜಾರಿ ಜಾರಿ ತರಲಾಗುತ್ತದೆ ಎಂದು CRPF ಡೈರೆಕ್ಟರ್ ಜನರಲ್ ಆರ್ ಆರ್ ಭಟ್ನಾಗರ್ ಹೇಳಿದ್ದಾರೆ.
ಪುಲ್ವಾಮದಲ್ಲಿ ದಾಳಿ ನಡೆದ ಬೆನ್ನಲ್ಲೇ ಕಾಶ್ಮೀರದಲ್ಲಿ 2 ದಿನಗಳ ಪ್ರವಾಸ ಕೈಗೊಂಡಿದ್ದು, ಟ್ರಾಫಿಕ್ ಕಂಟ್ರೋಲ್, ಸೇನಾ ಸಂಚಾರದ ಸಮಯ ಬದಲಾವಣೆ, ಉಳಿದುಕೊಳ್ಳುವ ಸ್ಥಳಗಳ ಬದಲಾವಣೆ ಸೇರಿದಂತೆ ವಿವಿಧ ರೀತಿಯ ಬದಲಾವಣೆ ಮಾಡಲಾಗುತ್ತದೆ ಎಂದರು.
2 ಪಡೆಗಳು ಲಾಟೂಮೋಡ್ ಮತ್ತು ಪುಲ್ವಾಮದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇಲ್ಲಿ ಪರೀಕ್ಷಾರ್ಥವಾಗಿ ಇಲ್ಲಿ ಬದಲಾವಣೆಯ ನಿಯಮಗಳನ್ನು ಜಾರಿ ತರಲಾಗುತ್ತದೆ. ಜಮ್ಮು ಕಾಶ್ಮೀರದಲ್ಲಿ ಸೇನಾ ಪಡೆ ವಾಹನಗಳು ಸಂಚರಿಸುವಾಗಿ ಯಾವುದೇ ನಾಗರಿಕರ ವಾಹನಗಳ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ