
ನವದೆಹಲಿ (ಮಾ.18): ಪಂಜಾಬ್ ನೂತನ ಸರ್ಕಾರದ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ನೇತೃತ್ವದಲ್ಲಿ ನಡೆದ ಮೊದಲ ಶಾಸಕಾಂಗ ಸಭೆಯಲ್ಲಿ ವಿಐಪಿ ಸಂಸ್ಕೃತಿಯನ್ನು ಸಂಪೂರ್ಣ ತೊಡೆದು ಹಾಕಲು ನಿರ್ಧರಿಸಲಾಗಿದ್ದು ಅವರ ಅಧಿಕೃತ ವಾಹನಗಳಿಂದ ಕೆಂಪು, ಹಳದಿ ಮತ್ತು ನೀಲಿ ಬಣ್ಣದ ದೀಪಗಳನ್ನು ತೆಗೆದು ಹಾಕಲು ತೀರ್ಮಾನಿಸಲಾಗಿದೆ.
ರಾಜ್ಯದಲ್ಲಿ ವಿಐಪಿ ಸಂಸ್ಕೃತಿಯನ್ನು ತೆಗೆದು ಹಾಕಲು ನಮ್ಮ ಶಾಸಕಾಂಗದಲ್ಲಿ ಅವಿರೋಧವಾಗಿ ನಿರ್ಧರಿಸಿದ್ದೇವೆ. ಎಲ್ಲಾ ಶಾಸಕರು ಹಾಗೂ ಅಧಿಕಾರಿಗಳ ವಾಹನಗಳಿಂದ ಬೀಕಾನ್ ದೀಪಗಳನ್ನು ತೆಗೆದು ಹಾಕಲಾಗುತ್ತದೆ ಎಂದು ಅಮರಿಂದರ್ ಸಿಂಗ್ ಟ್ವೀಟ್ ಮಾಡಿದ್ದಾರೆ.
ಅದೇ ರೀತಿ ರಾಜ್ಯದಲ್ಲಿ ಮದ್ಯ ಮಾರಾಟವನ್ನು ಕಡಿಮೆ ಮಾಡಲು ಮತ್ತು ನೂತನ ಅಬಕಾರಿ ನೀತಿ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಗುತ್ತಿಗೆ ಆಧಾರಿತ ನೇಮಕಾತಿ ಸೇರಿದಂತೆ ಸರ್ಕಾರಿ ಎಲ್ಲಾ ಹುದ್ದೆಗಳಲ್ಲೂ ಶೇ.33 ರಷ್ಟು ಮಹಿಳೆಯರಿಗೆ ಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.