ಸೋಲಿನ ಹೊಣೆ ಹೊತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನಾಯಕ ರಾಜೀನಾಮೆ

Published : May 27, 2019, 06:28 PM IST
ಸೋಲಿನ ಹೊಣೆ ಹೊತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನಾಯಕ ರಾಜೀನಾಮೆ

ಸಾರಾಂಶ

ಲೋಕಸಭಾ ಚುನಾವಣೆ ಸೋಲಿನ ನಂತರ ಒಬ್ಬಬ್ಬರಾಗಿ ಕಾಂಗ್ರೆಸ್ ನಾಯಕರು ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಾರೆ. ಮಹಾರಾಷ್ಟ್ರ, ಉತ್ತರಪ್ರದೇಶ ಅಧ್ಯಕ್ಷರು ರಾಜೀನಾಮೆ ಬೆನ್ನಲ್ಲೇ ಮತ್ತೋರ್ವ ಕಾಂಗ್ರೆಸ್ ನಾಯಕ ರಾಜೀನಾಮೆ ನೀಡಿದ್ದಾರೆ.

ಚಂಡೀಗಢ, (ಮೇ 27): ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ನೈತಿಕ ಹೊಣೆ ಹೊತ್ತು  ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ಸುನೀಲ್ ಜಖಾರ್ ಅವರು ರಾಜೀನಾಮೆ ನೀಡಿದ್ದಾರೆ.

ಗುರ್ ದಾಸ್ ಪುರ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸುನೀಲ್, ಬಿಜೆಪಿ ಅಭ್ಯರ್ಥಿ ಸನ್ನಿ ಡಿಯೋಲ್ ವಿರುದ್ಧ ಸೋಲು ಕಂಡಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಸೋಲು ಹಾಗೂ ಪಕ್ಷದ ಕಳಪೆ ಸಾಧನೆಯ ಹೊಣೆ ಹೊತ್ತು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಇತ್ತೀಚೆಗೆ ಉತ್ತರಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಜ್ ಬಬ್ಬರ್ ಅವರು ಕೂಡಾ ಪಕ್ಷದ ಕಳಪೆ ಪ್ರದರ್ಶನದ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಅಷ್ಟೇ ಅಲ್ಲದೇ ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಅಶೋಕ್‌ ಚವಾಣ್‌ ರಾಜೀನಾಮೆ ನೀಡಿರುವುದನ್ನು ಇಲ್ಲಿ ಸ್ಮರಿಸಲಬಹುದು.

542 ಸ್ಥಾನಗಳ ಪೈಕಿ ಎನ್‌ಡಿಎ 353, ಯುಪಿಎ 91 ಸ್ಥಾನಗಳಲ್ಲಿ ಇತರರಿಗೆ 98 ಸೀಟುಗಳು ಸಿಕ್ಕಿವೆ. ಇನ್ನು  ಕರ್ನಾಟಕದಲ್ಲಿ 28 ಸ್ಥಾನಗಳ ಪಕಿ ಕಾಂಗ್ರೆಸ್ ಜೆಡಿಎಸ್ ತಲಾ 1 ಸ್ಥಾನವನ್ನು ಮಾತ್ರ ಗೆದ್ದುಕೊಂಡರೆ, ಬಿಜೆಪಿ 25 ಹಾಗೂ ಒಂದು ಕ್ಷೇತ್ರ ಪಕ್ಷೇತರ ಪಾಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಳೆನರಸೀಪುರದ ಲಕ್ಷ್ಮಿನರಸಿಂಹ ಸ್ವಾಮಿ ರಥೋತ್ಸವ: ರಥದ ಅಲಂಕಾರದಲ್ಲಿ ರಾಜಕೀಯ:ಶ್ರೇಯಸ್ ಪಟೇಲ್ ವಿರುದ್ಧ JDS ಕಾರ್ಯಕರ್ತರ ಆಕ್ರೋಶ
ಇರಾನ್ ದಾಳಿಯ ಸಾವಿನ ದವಡೆಯಿಂದ ಪಾರಾಗಿ ಬೆಂಗಳೂರಿಗೆ ಬಂದಿಳಿದ 230 ಕನ್ನಡಿಗರು; ಬಾಂಬ್ ಬೀಳುವ ಅನುಭವ ಬಿಚ್ಚಿಟ್ಟರು!