ಸುಪ್ರೀಂ ತೀರ್ಪು ವಿರೋಧಿಸಿ ಸಾಮೂಹಿಕ ರಾಜೀನಾಮೆ ನೀಡಿದ ಶಾಸಕರು

By Suvarna Web DeskFirst Published Nov 11, 2016, 6:49 AM IST
Highlights

ಸಟ್ಲೆಜ್-ಯಮುನಾ ನದಿಗಳನ್ನು ಸಂಪರ್ಕಿಸುವ ಕಾಲುವೆ ನಿರ್ಮಾಣ ವಿವಾದದ ವಿಚಾರಣೆ ನಡೆಸಿದ ಐವರು ನ್ಯಾಯಾಧೀಶರನ್ನೊಳಗೊಂಡ ಸಾಂವಿಧಾನಿಕ ಪೀಠ, ಹರ್ಯಾಣದ ಜೊತೆಗಿನ ನೀರು ಹಂಚಿಕೆ ಒಪ್ಪಂದವನ್ನು ಮುರಿಯುವ ಯಾವುದೇ ಅಧಿಕಾರ ಪಂಜಾಬ್ ಸರ್ಕಾರಕ್ಕಿಲ್ಲ ಎಂದಿದೆ. ಅಲ್ಲದೆ ಕಾಲುವೆ ಕಾಮಮಗಾರಿಯನ್ನು ಪೂರ್ಣಗೊಳಿಸುವಂತೆ ಸೂಚಿಸಿದೆ. ಇನ್ನು ಸುಪ್ರೀಂ ಕೋಟ್ ತೀರ್ಪು ವಿರೋಧಿಸಿ ಪ್ರತಿಪಕ್ಷ ಕಾಂಗ್ರೆಸ್ ರಾಜ್ಯಾಧ್ಯಕ್ಷ, ಸಂಸದ ಅಮರಿಂದರ್ ಸಿಂಗ್ ಅವರು ಸೇರಿದಂತೆ ಎಲ್ಲಾ ಶಾಸಕರು ಸಾಮೂಹಿಕ ರಾಜಿನಾಮೆ ನೀಡಿದ್ದಾರೆ.

ಪಂಜಾಬ್(ನ.11): ಪಂಜಾಬ್ ಸರ್ಕಾರ ನೆರೆಯ ಹರಿಯಾಣದೊಂದಿಗೆ ನೀರು ಹಂಚಿಕೊಳ್ಳಬೇಕು ಎಂದು  ಮಹತ್ವದ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್, ಸಟ್ಲೇಜ್‌ ಮತ್ತು ಯಮುನಾ ನದಿ ಜೋಡಿಸುವ ಕಾಲುವೆ ನಿರ್ಮಾಣದ ಯೋಜನೆಯನ್ನೇ ರದ್ದುಪಡಿಸಿ ಪಂಜಾಬ್‌ ವಿಧಾನಸಭೆ ಅಂಗೀಕರಿಸಿದ ನಿರ್ಣಯ ಅಸಾಂವಿಧಾನಿಕ ಕ್ರಮ ಎಂದಿದೆ.

ಸಟ್ಲೆಜ್-ಯಮುನಾ ನದಿಗಳನ್ನು ಸಂಪರ್ಕಿಸುವ ಕಾಲುವೆ ನಿರ್ಮಾಣ ವಿವಾದದ ವಿಚಾರಣೆ ನಡೆಸಿದ ಐವರು ನ್ಯಾಯಾಧೀಶರನ್ನೊಳಗೊಂಡ ಸಾಂವಿಧಾನಿಕ ಪೀಠ, ಹರ್ಯಾಣದ ಜೊತೆಗಿನ ನೀರು ಹಂಚಿಕೆ ಒಪ್ಪಂದವನ್ನು ಮುರಿಯುವ ಯಾವುದೇ ಅಧಿಕಾರ ಪಂಜಾಬ್ ಸರ್ಕಾರಕ್ಕಿಲ್ಲ ಎಂದಿದೆ. ಅಲ್ಲದೆ ಕಾಲುವೆ ಕಾಮಮಗಾರಿಯನ್ನು ಪೂರ್ಣಗೊಳಿಸುವಂತೆ ಸೂಚಿಸಿದೆ.

ಇನ್ನು ಸುಪ್ರೀಂ ಕೋಟ್ ತೀರ್ಪು ವಿರೋಧಿಸಿ ಪ್ರತಿಪಕ್ಷ ಕಾಂಗ್ರೆಸ್ ರಾಜ್ಯಾಧ್ಯಕ್ಷ, ಸಂಸದ ಅಮರಿಂದರ್ ಸಿಂಗ್ ಅವರು ಸೇರಿದಂತೆ ಎಲ್ಲಾ ಶಾಸಕರು ಸಾಮೂಹಿಕ ರಾಜಿನಾಮೆ ನೀಡಿದ್ದಾರೆ.

click me!