
ಚಂಡೀಗಡ್[ಜೂ.15]: ಪಂಜಾಬ್ನ ಮುಕ್ತಸರ್ನ ಸ್ಥಲೀಯ ಕಾಂಗ್ರೆಸ್ ನಾಯಕನ ಸಹೋದರ ಹಣಕ್ಕಾಗಿ ಮಹಿಳೆಯೊಬ್ಬಳನ್ನು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಳಕಿಗೆ ಬಂದಿದೆ.
ಮುಕ್ತಸರ್ ನಗರ ಪಾಲಿಕೆ ಸದಸ್ಯ ರಾಕೆಶ್ ಚೌಧರಿಯ ಸಹೋದರ ಹಾಗೂ ಆತನ ಗೆಳೆಯರು ಸೇರಿ ಮಹಿಳೆಯೊಬ್ಬಳನ್ನು ಆಕೆಯ ಮನೆಯಿಂದ ಹೊರಗೆಳೆದು ತಂದು ಬೆಲ್ಟ್ ಹಾಗೂ ದೊಣ್ಣೆಯಿಂದ ಥಳಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮಿಡಿಯಾಗಳಲ್ಲಿ ಹರಿದಾಡಲಾರಂಭಿಸಿದಾಗ ಇಂತಹ ಒಂದು ಅಮಾನವೀಯ ಘಟನೆ ನಡೆದಿದೆ ಎಂಬುವುದು ಬೆಳಕಿಗೆ ಬಂದಿದೆ.
ಮಹಿಳೆಯನ್ನು ಅವಾಚ್ಯ ಪದಗಳಿಂದ ನಿಂದಿಸಿ, ಥಳಿಸುತ್ತಿದ್ದ ವೇಳೆ ಆಕೆಯ ಸಹಾಯಕ್ಕೆ ಧಾವಿಸಿದ್ದ ಮತ್ತೊಬ್ಬ ಮಹಿಳೆಯನ್ನೂ ಆರೋಪಿಗಳು ಹೊಡೆದಿದ್ದಾರೆ. ಸದ್ಯ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆಯ ಪರಿಸ್ಥಿತಿ ಬಹಳ ಗಂಭೀರವಾಗಿದೆ ಎನ್ನಲಾಗಿದೆ.
ಪ್ರಕರಣದ ಕುರಿತಾಗಿ ಪ್ರತಿಕ್ರಿಯಿಸಿರುವ ಪೊಲೀಸ್ ಆಧೀಕ್ಷಕ ಮಂಜೀತ್ ಡೇಸಿ 'ಇದೊಂದು ಅತ್ಯಂತ ಅಮಾನವೀಯ ಕೃತ್ಯ. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ನೋಡಿಕೊಳ್ಳುತ್ತೇವೆ ಹಾಗೂ ಯಾವುದೇ ರಾಜಕೀಯ ಪಕ್ಷಗಳ ಹಸ್ತಕ್ಷೇಪವಿಲ್ಲದೇ ತನಿಖೆ ನಡೆಸುತ್ತೇವೆ' ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.