ಖಾಕಿಯ ಅಮಾನುಷ ಕೃತ್ಯ :ಮಹಿಳೆಯನ್ನು ಜೀಪ್ ಮೇಲೆ ಕಟ್ಟಿ ದೌರ್ಜನ್ಯ

Published : Sep 27, 2018, 03:37 PM ISTUpdated : Sep 27, 2018, 08:44 PM IST
ಖಾಕಿಯ ಅಮಾನುಷ ಕೃತ್ಯ :ಮಹಿಳೆಯನ್ನು ಜೀಪ್ ಮೇಲೆ ಕಟ್ಟಿ ದೌರ್ಜನ್ಯ

ಸಾರಾಂಶ

ಮಹಿಳೆಯನ್ನು ಮೆರವಣಿಗೆ ಮಾಡುವಾಗ ಮಹಿಳೆಯು ಕೆಳಗೆ ಬಿದ್ದು ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ತಿ ವಿವಾದಕ್ಕೆ ಸಬಂಧಿಸಿದಂತೆ ಮಹಿಳೆಯ ಮಾವನನ್ನು ಬಂಧಿಸಲು ಪೊಲೀಸರು ಆಗಮಿಸಿದ್ದರು. 

ಅಮೃತ್ ಸರ್ [ಸೆ.27]:  ದೇಶದಲ್ಲೇ ತಲ್ಲಣಗೊಳಿಸಿವ ದೌರ್ಜನ್ಯವನ್ನು ಪಂಜಾಬ್ ಪೊಲೀಸರು ಎಸಗಿದ್ದಾರೆ. ಪತಿಯನ್ನು ಬಂಧನಪಡಿಸಲು ಅಡ್ಡಿಪಡಿಸಿದ ಮಧ್ಯವಯಸ್ಕ ಮಹಿಳೆಯೊಬ್ಬರನ್ನು ಬಲವಂತವಾಗಿ ಜೀಪ್ ಮೇಲೆ ಕಟ್ಟಿ ರಸ್ತೆಯಲ್ಲಿ ಮೆರವಣಿಗೆ ಮಾಡಿದ ಘಟನೆ ಪಂಜಾಬಿನ ಅಮೃತ್ ಸರ್ ಜಿಲ್ಲೆಯಲ್ಲಿ ನಡೆದಿದೆ.

ಮಹಿಳೆಯನ್ನು ಮೆರವಣಿಗೆ ಮಾಡುವಾಗ ಮಹಿಳೆಯು ಕೆಳಗೆ ಬಿದ್ದು ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ತಿ ವಿವಾದಕ್ಕೆ ಸಬಂಧಿಸಿದಂತೆ ಮಹಿಳೆಯ ಮಾವನನ್ನು ಬಂಧಿಸಲು ಪೊಲೀಸರು ಆಗಮಿಸಿದ್ದರು. ಆ ಸಂದರ್ಭದಲ್ಲಿ ಮನೆಯಲ್ಲಿ ಮಾವ ಇರಲಿಲ್ಲ. ಆಕೆಯ ಪತಿಯನ್ನು ಬಲವಂತವಾಗಿ ಕರೆದುಕೊಂಡು ಹೋಗುವಾಗ ಮಹಿಳೆಯು ಅಡ್ಡಿಪಡಿಸಿದ್ದಳು. 

ಇದಕ್ಕೆ ಸಿಟ್ಟಾದ ಪೊಲೀಸರು ದರದರನೆ ಎಳೆದು ಜೀಪ್ ಮೇಲೆ ಕಟ್ಟಿ ದೌರ್ಜನ್ಯವೆಸಗಿದ್ದಾಳೆ. ಸ್ಥಳೀಯರು ಈ ದೃಶ್ಯವನ್ನು ಚಿತ್ರೀಕರಿಸಿಕೊಂಡಿದ್ದು ಪೊಲೀಸರ ಅಮಾನುಷ ಕೃತ್ಯ ಕೆಲವೇ ಗಂಟೆಗಳಲ್ಲಿ ವೈರಲ್ ಆಗಿ ದೇಶಾದ್ಯಂತ ಹಬ್ಬಿದೆ. ಆದರೆ ಇಲ್ಲಿಯವರೆಗೂ ಪೊಲೀಸರ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ. ಘಟನೆಯನ್ನು ವಿರೋಧ ಪಕ್ಷ ಶಿರೋಮಣಿ ಅಕಾಲಿದಳ ಖಂಡಿಸಿದ್ದು ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಿಜೆಪಿಯಿಂದ ಟಿಕೆಟ್ ಗಿಟ್ಟಿಸಿಕೊಂಡ ಸೋನಿಯಾ ಗಾಂಧಿಗೆ ಕೇರಳ ಚುನಾವಣೆಯಲ್ಲಿ ಸೋಲು
ಬೆಂಗಳೂರು: 2 ಲಕ್ಷ ಬೆಲೆಯ ಗಿಳಿ ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವಕ!