ಪೂರ್ಣಕುಂಭ ಮೆರವಣಿಗೆ ಸುಸೂತ್ರ: 90 ವಿಧವೆಯರು ಭಾಗಿ

Published : Jan 05, 2019, 11:03 AM IST
ಪೂರ್ಣಕುಂಭ ಮೆರವಣಿಗೆ ಸುಸೂತ್ರ: 90 ವಿಧವೆಯರು ಭಾಗಿ

ಸಾರಾಂಶ

84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೂ ಮೊದಲೇ ವಿವಾದಕ್ಕೀಡಾಗಿದ್ದ ಉದ್ದೇಶಿತ ಪೂರ್ಣಕುಂಭ ಮೆರವಣಿಗೆ ಶುಕ್ರವಾರ ಬೆಳಿಗ್ಗೆ ಸಮ್ಮೇಳನದ ಉದ್ಘಾಟನೆಗೂ ಮುನ್ನ ನಿರಾತಂಕವಾಗಿ ಅದ್ಧೂರಿಯಾಗಿ ನಡೆಯಿತು. 1001 ಮಹಿಳೆಯರು ಖುಷಿ ಖುಷಿಯಿಂದಲೇ ಕುಂಭ ಹೊತ್ತು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ಮೆರವಣಿಗೆಯಲ್ಲಿ 90ಕ್ಕೂ ಹೆಚ್ಚು ವಿಧವೆಯರು ಭಾಗಿಯಾಗಿದ್ದು ವಿಶೇಷವಾಗಿತ್ತು. 

 ಧಾರವಾಡ (ಜ. 05):  84 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೂ ಮೊದಲೇ ವಿವಾದಕ್ಕೀಡಾಗಿದ್ದ ಉದ್ದೇಶಿತ ಪೂರ್ಣಕುಂಭ ಮೆರವಣಿಗೆ ಶುಕ್ರವಾರ ಬೆಳಿಗ್ಗೆ ಸಮ್ಮೇಳನದ ಉದ್ಘಾಟನೆಗೂ ಮುನ್ನ ನಿರಾತಂಕವಾಗಿ ಅದ್ಧೂರಿಯಾಗಿ ನಡೆಯಿತು. 1001 ಮಹಿಳೆಯರು ಖುಷಿ ಖುಷಿಯಿಂದಲೇ ಕುಂಭ ಹೊತ್ತು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ಮೆರವಣಿಗೆಯಲ್ಲಿ 90ಕ್ಕೂ ಹೆಚ್ಚು ವಿಧವೆಯರು ಭಾಗಿಯಾಗಿದ್ದು ವಿಶೇಷವಾಗಿತ್ತು.

ಸಮ್ಮೇಳನದಲ್ಲಿ ಪೂರ್ಣಕುಂಭ ಮೆರವಣಿಗೆ ನಡೆಸಲಾಗುತ್ತದೆ ಎಂಬ ತೀವ್ರ ವಿವಾದಕ್ಕೀಡಾಗಿತ್ತು. ಆಮಂತ್ರಣ ಪತ್ರಿಕೆಯಲ್ಲಿ ಪೂರ್ಣಕುಂಭವೆಂದಷ್ಟೇ ಮುದ್ರಿಸಿದ್ದರೂ ಸಂವಹನ ಕೊರತೆಯಿಂದ ಸುಮಂಗಲಿಯರಿಂದ ಪೂರ್ಣಕುಂಭ ನಡೆಸುವುದೇಕೆ? ಮಹಿಳೆಯರನ್ನು ಸುಮಂಗಲಿಯರು, ಅಮಂಗಲಿಯರು ಎಂದು ತಾರತಮ್ಯದಿಂದ ನೋಡುವುದೇಕೆ ಎಂದೆಲ್ಲ ಪ್ರಶ್ನೆಗಳು ಎದ್ದಿದ್ದವು. ಕೊನೆಗೆ ಕಸಾಪ ರಾಜ್ಯಾಧ್ಯಕ್ಷ ಮನು ಬಳಿಗಾರ ಸುದ್ದಿಗೋಷ್ಠಿ ನಡೆಸಿ, ನಾವು ಸುಮಂಗಲಿಯರು, ಅಮಂಗಲಿಯರು ಎಂದು ಹೇಳಿಯೇ ಇಲ್ಲ. ಪೂರ್ಣಕುಂಭದಲ್ಲಿ ವಿಧವೆಯರು, ತೃತೀಯ ಲಿಂಗಿಗಳು, ಆಸಕ್ತ ಪುರುಷರೂ ಭಾಗವಹಿಸಬಹುದು ಎಂದು ಸ್ಪಷ್ಟನೆ ನೀಡಿದ್ದರು.

ಸಾಂಕೇತಿಕ ಪ್ರತಿಭಟನೆ: ಸಮ್ಮೇಳನದಲ್ಲಿ ಪೂರ್ಣಕುಂಭ ಮೆರವಣಿಗೆ ನಡೆಸಿದ್ದನ್ನು ಖಂಡಿಸಿ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ಸುನಂದಾ ಕಡಮೆ ಸೇರಿ ಇತರರು ಸಮ್ಮೇಳನದ ಆವರಣದಲ್ಲಿ ಕೈಗೆ ಕಪ್ಪು ಪಟ್ಟಿಧರಿಸಿ ಸಾಂಕೇತಿಕವಾಗಿ ಪ್ರತಿಭಟಿಸಿದರು. ಒಕ್ಕೂಟದ ಸದಸ್ಯೆಯರು ಅವರ ಮಳಿಗೆಗೆ ಭೇಟಿ ನೀಡಿ ಬೆಂಬಲ ನೀಡಿದವರ ಕೈಗೂ ಕಪ್ಪುಪಟ್ಟಿಕಟ್ಟಿದರು. ಅಲ್ಲದೆ, ಮಹಿಳಾ ದೌರ್ಜನ್ಯ ಖಂಡಿಸಿ ಹಸ್ತಾಕ್ಷರ ಹಾಗೂ ಹೆಬ್ಬೆಟ್ಟು ಒತ್ತಿಸಿಕೊಳ್ಳುವ ಮೂಲಕ ಅಭಿಯಾನ ನಡೆಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

8ನೇ ಕ್ಲಾಸ್ ಹುಡುಗಿ ಮೇಲೆ ಬಲತ್ಕಾರ, ಬೆದರಿಸಿ ಚಿನ್ನ ದೋಚಿದ್ದ 10ನೇ ಕ್ಲಾಸ್ ಹುಡುಗ ಅರೆಸ್ಟ್
ಬಿಜೆಪಿ ನಾಯಕನ ಸಂಬಂಧಿ 17ರ ಯುವಕನಿಗೆ ಚೂರಿ ಇರಿದು ಕೊಂದ ದುಷ್ಕರ್ಮಿಗಳು!