
ಮಂಡ್ಯ : ರೈತ ಹೋರಾಟಗಾರ ಕೆ.ಎಸ್ ಪುಟ್ಟಣ್ಣಯ್ಯ ಅವರ ಅಂತಿಮ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ. ಅವರ ಹುಟ್ಟೂರಾದ ಮಂಡ್ಯದ ಖ್ಯಾತನಹಳ್ಳಿಯಲ್ಲಿ ಸಾವಿರಾರು ಜನರ ಸಮ್ಮುಖದಲ್ಲಿ ನೆರವೇರಿಸಲಾಗಿದೆ.
ಪಂಚಭೂತಗಳಲ್ಲಿ ರೈತ ಹೋರಾಟಗಾರ ಲೀನವಾಗಿದ್ದಾರೆ. ಪಟ್ಟಣ್ಣಯ್ಯ ಅವರ ತೋಟದಲ್ಲಿ ಮಣ್ಣು ಮಾಡಲಾಗಿದೆ. ಈವೇಳೆ ರೈತ ಗೀತೆಯನ್ನು ಹಾಡಲಾಗಿದೆ.
ಕುಟುಂಬದ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನಡೆದಿವೆ. ರಾಜ್ಯದ 30 ಜಿಲ್ಲೆಗಳ ಮಣ್ಣನ್ನು ತಂದು ಪುಟ್ಟಣ್ಣಯ್ಯ ಅವರ ಅಂತಿಮ ಸಂಸ್ಕಾರದ ವೇಳೆ ಅರ್ಪಿಸಲಾಗಿದೆ.
ಈ ವೇಳೆ ಸಾವಿರಾರು ಗಣ್ಯರು, ಅಭಿಮಾನಿಗಳೂ ಪುಟ್ಟಣ್ಣಯ್ಯ ಅವರ ಅಂತಿಮ ದರ್ಶನ ಪಡೆದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.