
ಮಂಡ್ಯ: ಅಂಬರೀಷ್ ಅವರ ಪಾರ್ಥಿವ ಶರೀರವನ್ನು ಕೊಂಡೊಯ್ಯಲು ಕೆಲವೇ ಗಂಟೆಗಳು ಬಾಕಿಯಿರುವಾಗ ಸಚಿವ ಸಿ.ಎಸ್. ಪುಟ್ಟರಾಜು ದುಃಖ ತಡೆಯಲಾರದೆ ಗಳಗಳನೆ ಅತ್ತರು.
ಸರ್ ಎಂ.ವಿ. ಕ್ರೀಡಾಂಗಣಕ್ಕೆ ಭಾನುವಾರ ಸಂಜೆಯಿಂದ ಸೋಮವಾರ ಬೆಳಗ್ಗೆವರೆಗೂ ಅಂಬರೀಷ್ ಪಾರ್ಥಿವ ಶರೀರ ನೋಡಲು ಸಾಗರೋಪಾದಿಯಲ್ಲಿ ಆಗಮಿಸುತ್ತಿದ್ದ ಜನರನ್ನು ಸಚಿವ ಸಿ.ಎಸ್.ಪುಟ್ಟರಾಜು ನಿಯಂತ್ರಿಸುತ್ತಿದ್ದರು.
ಅಂಬಿ ಪಾರ್ಥಿವ ಶರೀರವನ್ನು ಕೊಂಡೊಯ್ಯಲು ಕೆಲವೇ ಗಂಟೆಗಳು ಬಾಕಿಯಿರುವಾಗ ಅಭಿಮಾನಿಗಳನ್ನು ನಿಯಂತ್ರಿಸುವ ವೇಳೆ ಭಾವಪರವಶರಾದ ಪುಟ್ಟರಾಜು, ತನ್ನ ನೆಚ್ಚಿನ ಗೆಳೆಯನನ್ನ ಕಳೆದುಕೊಳ್ಳುತ್ತಿದ್ದೇನೆ ಎಂದು ನೆನೆದು ಗಳಗಳನೆ ಕಣ್ಣೀರು ಹಾಕಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.