
ಬೆಂಗಳೂರು : ಕೆಲ ತಿಂಗಳ ಹಿಂದೆ ವಿಧಾನಪರಿಷತ್ ಸದಸ್ಯ ಸ್ಥಾನ ನೀಡಲಿಲ್ಲ ಎಂದು ಪಕ್ಷದ ನಾಯಕತ್ವದ ಮೇಲೆ ಮುನಿಸಿಕೊಂಡಿದ್ದ ಮಾಜಿ ವಿಧಾನಪರಿಷತ್ ಸದಸ್ಯ ಬಿ.ಜೆ.ಪುಟ್ಟಸ್ವಾಮಿ ಸಮಾಧಾನಗೊಂಡಿದ್ದು, ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾಗಿ ಅವರು ಮುಂದುವರೆಯಲಿದ್ದಾರೆ.
ವಿಧಾನಪರಿಷತ್ ಸದಸ್ಯರಾಗಿ ಮತ್ತೊಂದು ಅವಧಿಗೆ ಮುಂದುವರೆಸಲಿಲ್ಲ ಎಂದು ಬೇಸರಗೊಂಡು ಪುಟ್ಟಸ್ವಾಮಿ ಅವರು ತಮ್ಮ ರಾಜಕೀಯ ಗಾಡ್ಫಾದರ್ ಯಡಿಯೂರಪ್ಪ ವಿರುದ್ಧ ನೇರವಾಗಿ ಆಕ್ಷೇಪ ವ್ಯಕ್ತಪಡಿಸಿ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ಕೊನೆಗೆ ತಮ್ಮ ಆಪ್ತ ಬೆಂಬಲಿಗನ ಮೂಲಕ ಕೋಪ ತಣಿಸಿರುವ ಯಡಿಯೂರಪ್ಪ ಅವರು, ಮತ್ತೆ ಪುಟ್ಟಸ್ವಾಮಿಗೆ ಪಕ್ಷದ ಸಂಘಟನೆ ಹೊಣೆಗಾರಿಕೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.