ಪುತ್ತೂರು ವಿವೇಕಾನಂದ ಸಂಸ್ಥೆಯಿಂದ ಸಂತ್ರಸ್ತರಿಗೆ ಉಚಿತ ಶಿಕ್ಷಣ

Published : Aug 23, 2018, 09:10 PM ISTUpdated : Sep 09, 2018, 10:15 PM IST
ಪುತ್ತೂರು ವಿವೇಕಾನಂದ ಸಂಸ್ಥೆಯಿಂದ ಸಂತ್ರಸ್ತರಿಗೆ ಉಚಿತ ಶಿಕ್ಷಣ

ಸಾರಾಂಶ

ಕೊಡಗು ಸಂತ್ರಸ್ತ ಮಕ್ಕಳ ನೆರವಿಗೆ ಧಾವಿಸಿರುವ ವಿವೇಕಾನಂದ ವಿದ್ಯಾವರ್ಧಕ ಸಂಘ ಮಾದರಿ ಕೆಲಸವೊಂದಕ್ಕೆ ಮುಂದಾಗಿದೆ.  ಸಂತ್ರಸ್ತ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ತೀರ್ಮಾನ ಮಾಡಿದೆ.

ಪುತ್ತೂರು(ಆ.23] ಕೊಡಗು ಸಂತ್ರಸ್ತರಿಗೆ ಆರ್ಥಿಕ ಸಹಾಯ, ದೈನಂದಿನ ಆಹಾರ ಪೂರೈಕೆ ಮಾಡಲು ಸಂಸ್ಥೆ ಹೆಜ್ಜೆ ಇಟ್ಟಿದೆ.  ಸಂಸ್ಥೆ ಪ್ರಾಥಮಿಕ ಶಾಲೆಗಳಿಂದ ತೊಡಗಿ ಪಿಯುಸಿ, ಪದವಿ, ಇಂಜಿನಿಯರಿಂಗ್, ಕಾನೂನು, ಬಿ.ಎಡ್, ಎಂಬಿಎ, ಪಾಲಿಟಿಕ್ನಿಕ್  ಸೇರಿದಂತೆ ಎಲ್ಲ ರೀತಿಯ ಅಧ್ಯಯನಕ್ಕೆ ಅವಕಾಶ ಮಾಡಿಕೊಡುತ್ತಾ ಬಂದಿದೆ.

ಪ್ರವಾಹ ಸಂತ್ರಸ್ತರಾಗಿ ಸಂಕಷ್ಟಕ್ಕೆ ಸಿಲುಕಿರುವ ಮಕ್ಕಳಿಗೆ ಮುಂದಿನ ಒಂದು ವರ್ಷ ಕಾಲ ಉಚಿತ ವಸತಿ ಮತ್ತು ಶಿಕ್ಷಣ ನೀಡಲು ಸಂಸ್ಥೆ ತೀರ್ಮಾನ ಮಾಡಿದೆ. ಒಂದು ವೇಳೆ ಪದವಿಯ ದ್ವಿತೀಯ ವರ್ಷದಲ್ಲಿದ್ದರೂ ದಾಖಲೆ ಮಾಡಿಕೊಳ್ಳಲು ಸಂಸ್ಥೆ ಮುಂದಾಗಿದೆ. ಉಪನ್ಯಾಸಕ ವೃಂದ ಮತ್ತು ವಿದ್ಯಾರ್ಥಿಗಳು ಒಂದು ಮಟ್ಟಿನ ಆರ್ಥಿಕ ಸಹಾಯ ಮಾಡಿದ್ದು ಇದೀಗ ಶಿಕ್ಷಣಕ್ಕೆ ಅವಕಾಶ ಮಾಡಿಕೊಡುತ್ತಿದೆ.

ಮಳೆ ಬಂದರೆ ಕೊಡಗು, ದಕ್ಷಿಣ ಕನ್ನಡದಲ್ಲಿ ಭೂಮಿ ಏಕೆ ಕುಸಿಯುತ್ತೆ?

ಹೆಚ್ಚಿನ ಮಾಹಿತಿಗೆ:
ಲಕ್ಷ್ಮೀ ಪ್ರಸಾದ್ - 9972420885
ವೆಂಕಟೇಶ್ - 9731774703
ರಘುರಾಜ್ ಉಬರಡ್ಕ - 9449061223
"ವಿವೇಕಾನಂದ " ವಿದ್ಯಾವರ್ಧಕ ಸಂಘದ ಕಛೇರಿ - 08251236599
ವೆಬ್ ಸೈಟ್ : www.vivekanandaedu.org

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಈ ಟ್ರೆಂಡ್ ಶುರು ಮಾಡಿದ್ದು ಮೆಹಬೂಬಾ: ನಿತೀಶ್‌ಕುಮಾರ್ ಬುರ್ಖಾ ಎಳೆದಿದ್ದಕ್ಕೆ ಮುಫ್ತಿಗೆ ಒಮರ್ ಟಾಂಗ್
ದರ್ಶನ್ ಭೇಟಿಗೆ, ಪವಿತ್ರಾ ಗೌಡ ಪರಿಪರಿಯಾಗಿ ಬೇಡಿಕೊಂಡರೂ ಡಿಜಿಪಿ ಅಲೋಕ್ ಕುಮಾರ್ ನಿರಾಕರಿಸಿದ್ದೇಕೆ!