ಕೊಲ್ಲಿ ಬಿಕ್ಕಟ್ಟು: ಪಾಕಿಸ್ತಾನದ ಮೊರೆ ಹೋದ ಕತರ್

Published : Jul 18, 2017, 09:53 PM ISTUpdated : Apr 11, 2018, 01:05 PM IST
ಕೊಲ್ಲಿ ಬಿಕ್ಕಟ್ಟು: ಪಾಕಿಸ್ತಾನದ ಮೊರೆ ಹೋದ ಕತರ್

ಸಾರಾಂಶ

ಕೊಲ್ಲಿ ದೇಶಗಳ ನಡುವೆ ಉಂಟಾಗಿರುವ ರಾಜತಾಂತ್ರಿಕ ಬಿಕ್ಕಟ್ಟನ್ನು ಬಗೆಹರಿಸುವಂತೆ ಕತರ್ ದೇಶವು ಪಾಕಿಸ್ತಾನದ ಮೊರೆ ಹೋಗಿದೆ. ಕತರ್ ಹಾಗೂ ಇತರ ಕೊಲ್ಲಿ ದೇಶಗಳ ನಡುವೆ ಉಂಟಾಗಿರುವ ರಾಜತಾಂತ್ರಿಕ ಬಿಕ್ಕಟ್ಟನ್ನು ಶಮನಗೊಳಿಸುವ ನಿಟ್ಟಿನಲ್ಲಿ ಪಾಕಿಸ್ತಾನವು ರಚನಾತ್ಮಕ ಪಾತ್ರ ವಹಿಸಬೇಕೆಂದು ಪಾಕಿಸ್ತಾನ ಪ್ರಧಾನಿ ನವಾಝ ಶರೀಫ್’ರನ್ನು ಭೇಟಿಯಾದ ಕತರ್ ವಿದೇಶಾಂಗ ಸಚಿವ ಶೇಕ್ ಮೊಹಮ್ಮದ್ ಬಿನ್ ಅಬ್ದುಲ್ ರಹ್ಮಾನ್ ಅಲ್ ಥಾನಿ ಮನವಿ ಮಾಡಿದ್ದಾರೆ.

ಇಸ್ಲಾಮಾಬಾದ್: ಕೊಲ್ಲಿ ದೇಶಗಳ ನಡುವೆ ಉಂಟಾಗಿರುವ ರಾಜತಾಂತ್ರಿಕ ಬಿಕ್ಕಟ್ಟನ್ನು ಬಗೆಹರಿಸುವಂತೆ ಕತರ್ ದೇಶವು ಪಾಕಿಸ್ತಾನದ ಮೊರೆ ಹೋಗಿದೆ.

ಕತರ್ ಹಾಗೂ ಇತರ ಕೊಲ್ಲಿ ದೇಶಗಳ ನಡುವೆ ಉಂಟಾಗಿರುವ ರಾಜತಾಂತ್ರಿಕ ಬಿಕ್ಕಟ್ಟನ್ನು ಶಮನಗೊಳಿಸುವ ನಿಟ್ಟಿನಲ್ಲಿ ಪಾಕಿಸ್ತಾನವು ರಚನಾತ್ಮಕ ಪಾತ್ರ ವಹಿಸಬೇಕೆಂದು ಪಾಕಿಸ್ತಾನ ಪ್ರಧಾನಿ ನವಾಝ ಶರೀಫ್’ರನ್ನು ಭೇಟಿಯಾದ ಕತರ್ ವಿದೇಶಾಂಗ ಸಚಿವ ಶೇಕ್ ಮೊಹಮ್ಮದ್ ಬಿನ್ ಅಬ್ದುಲ್ ರಹ್ಮಾನ್ ಅಲ್ ಥಾನಿ ಮನವಿ ಮಾಡಿದ್ದಾರೆ.

ಕತರ್ ಉಗ್ರ ಸಂಘಟನೆಗಳಿಗೆ ಹಣಕಾಸು ನೆರವನ್ನು ಒದಗಿಸುತ್ತಿದೆ ಎಂದು ಆರೋಪಿಸಿ ಕೊಲ್ಲಿ ದೇಶಗಳಾದ ಸೌದಿ, ಬಹರೈನ್, ಯುಏಇ, ಹಾಗೂ ಈಜಿಪ್ಟ್, ಕತಾರ್’ನೊಂದಿಗೆ ತಮ್ಮ ರಾಜತಾಂತ್ರಿಕ ಸಂಬಂಧಗಳನ್ನು ಕಡಿದುಕೊಂಡಿವೆ. ಆದರೆ ಕತಾರ್ ಆರೊಪಗಳನ್ನು ನಿರಾಕರಿಸಿದೆ.

ಬಿಕ್ಕಟ್ಟನ್ನು ಸೌಹಾರ್ದಾಯುತವಾಗಿ ಬಗೆಹರಿಸುವ ನಿಟ್ಟಿನಲ್ಲಿ ಪಾಕಿಸ್ತಾನವು ಪ್ರಯತ್ನಿಸುವುದು ಎಂದು ಪ್ರಧಾನಿ ನವಾಝ ಶರೀಫ್ ಭರವಸೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಾವಣಗೆರೆ ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳ ಸರಣಿ ಸಾವು, ಸಾರ್ವಜನಿಕರಿಗೆ ಪ್ರವೇಶ ನಿಷೇಧ, ವೈದ್ಯರ ತೀವ್ರ ನಿಗಾ
ಬೆಂಗಳೂರಿಗೆ ಟಕ್ಕರ್ ಕೊಡೋಕೆ ಹೋಗಿ ಕೇಂದ್ರದಿಂದ ಮತ್ತೆ ಛೀಮಾರಿ ಹಾಕಿಸಿಕೊಂಡ ತಮಿಳುನಾಡು