'ಅಶೋಕ್‌ ನನ್ನ ಅಣ್ಣ ಇದ್ದಂತೆ, ಭಿನ್ನಾಭಿಪ್ರಾಯವಿಲ್ಲ'

Published : Sep 18, 2019, 08:37 AM IST
'ಅಶೋಕ್‌ ನನ್ನ ಅಣ್ಣ ಇದ್ದಂತೆ, ಭಿನ್ನಾಭಿಪ್ರಾಯವಿಲ್ಲ'

ಸಾರಾಂಶ

ಅಶೋಕ್‌ ನನ್ನ ಅಣ್ಣ ಇದ್ದಂತೆ| ನಮ್ಮ ನಡುವೆ ಭಿನ್ನಾಭಿಪ್ರಾಯವಿಲ್ಲ: ಅಶ್ವತ್ಥನಾರಾಯಣ| ನನ್ನ-ಅವರ ನಡುವೆ ಭಿನ್ನಾಭಿಪ್ರಾಯವಿಲ್ಲ| ಅಧಿಕಾರಕ್ಕಾಗಿ ಸಂಬಂಧ ಕೆಡಿಸಿಕೊಳ್ಳುತ್ತೇವಾ?

ಬೆಂಗಳೂರು[ಸೆ.18]: ಕಂದಾಯ ಸಚಿವರಾದ ಆರ್‌.ಅಶೋಕ್‌ ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಅವರು ನನ್ನ ಅಣ್ಣನ ಸಮಾನ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದ್ದಾರೆ.

ಬಿಜೆಪಿ ಕಚೇರಿಯ ಬಳಿ ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ಕಂದಾಯ ಸಚಿವರು ಮತ್ತು ನನ್ನ ನಡುವೆ ಭಿನ್ನಾಭಿಪ್ರಾಯ ಇದೆ ಎನ್ನುವುದು ಕೇವಲ ವದಂತಿ. ಈಗಲೂ ಅಶೋಕ್‌ ಅವರ ಜತೆ ನಾನು ಊಟ ಮಾಡುತ್ತೇನೆ. ಅವರ ಮನೆಗೂ ಹೋಗಿಬರುತ್ತೇನೆ. ಹಲವು ಸಂದರ್ಭಗಳಲ್ಲಿ ಅವರ ಜತೆ ಓಡಾಡಿದ್ದೇನೆ. ಅವರು ನನಗೆ ಅಣ್ಣನ ಸಮಾನ, ಹೀಗಾಗಿ ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯಕ್ಕೆ ಅವಕಾಶವಿಲ್ಲ ಎಂದರು.

ಅಶೋಕ ಅವರ ಕುಟುಂಬ ಹಾಗೂ ನಮ್ಮ ಕುಟುಂಬ ಸಹೋದರರ ರೀತಿ ಇದ್ದೇವೆ. ಅಧಿಕಾರ ಯಾರಿಗೂ ಶಾಶ್ವತವಲ್ಲ. ಅಧಿಕಾರ ಇವತ್ತು ಬರುತ್ತೆ, ನಾಳೆ ಹೋಗುತ್ತದೆ. ಅಧಿಕಾರಕ್ಕಾಗಿ ಸಂಬಂಧಗಳನ್ನು ಹಾಳು ಮಾಡಿಕೊಳ್ಳಲು ಸಾಧ್ಯವೇ ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.

ಸಿಎಂ ಉಸ್ತುವಾರಿ ಉತ್ತಮ:

ಬೆಂಗಳೂರು ಉಸ್ತುವಾರಿಯನ್ನು ಮುಖ್ಯಮಂತ್ರಿಗಳು ತಮ್ಮ ಬಳಿಯೇ ಇಟ್ಟುಕೊಂಡಿರುವುದು ಉತ್ತಮ. ಇದರಿಂದ ಬೆಂಗಳೂರು ಅಭಿವೃದ್ಧಿಗೆ ಸಹಾಯವಾಗುತ್ತದೆ ಎಂದು ಇದೇ ವೇಳೆ ಉಪಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ಯಡಿಯೂರಪ್ಪ ಅವರ ಜತೆ ನಾವು ಕೈಜೋಡಿಸಿಕೊಂಡು ಕೆಲಸ ಮಾಡುತ್ತೇವೆ. ಒಟ್ಟಾರೆ ಬೆಂಗಳೂರು ನಗರದ ಅಭಿವೃದ್ಧಿಗೆ ನಾವೆಲ್ಲ ಒಟ್ಟಾಗಿ ಕೆಲಸ ಮಾಡುತ್ತೇವೆ. ಎಲ್ಲೇ ಇದ್ದರೂ ನನಗೆ ವಹಿಸಿದ ಜವಾಬ್ದಾರಿ ನಿರ್ವಹಿಸುವ ವಿಶ್ವಾಸವಿದೆ. ಬೆಂಗಳೂರು ಇಡೀ ರಾಜ್ಯಕ್ಕೆ ಸಂಬಂಧಿಸಿದ್ದು. ಬೆಂಗಳೂರಿನಲ್ಲಿ ಸುಗಮ ಸಂಚಾರಕ್ಕೆ ಒತ್ತು ನೀಡುತ್ತೇವೆ. ಮುಖ್ಯಮಂತ್ರಿ ಅವರೇ ಬೆಂಗಳೂರು ಉಸ್ತುವಾರಿ ಹೊಂದಿರುವುದರಿಂದ ಪ್ರತಿ 15 ದಿನಕ್ಕೊಮ್ಮೆ ನಗರ ದರ್ಶನ ಮಾಡಿ, ಸಮಸ್ಯೆಗಳನ್ನು ಬಗೆಹರಿಸಲು ಶ್ರಮಿಸಲಿದ್ದಾರೆ ಎಂದು ತಿಳಿಸಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ರಾಮನಗರ ಜಿಲ್ಲಾ ಉಸ್ತುವಾರಿ ನೀಡಿರುವುದು ನನಗೆ ಸದವಕಾಶ. ಉತ್ತಮವಾಗಿ ಕೆಲಸ ಮಾಡುತ್ತೇನೆ ಎಂಬ ವಿಶ್ವಾಸವಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಡಿಯೋ: ಅಂತರರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನಕ್ಕೆ ಅವಮಾನ: ಶಹಬಾಜ್ ಷರೀಫ್‌ರನ್ನು ನಿರ್ಲಕ್ಷಿಸಿದ ಪುಟಿನ್!
ಯುಎಇ ಕಠಿಣ ಕಾನೂನು: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ವೇಶ್ಯಾವಾಟಿಕೆಗೆ ಶಿಕ್ಷೆ ಪ್ರಮಾಣ ಭಾರೀ ಹೆಚ್ಚಳ!