ಎಸ್'ಎಂಕೆ ನಂತರ ಮತ್ತೊಬ್ಬ ಪ್ರಬಲ ನಾಯಕನಿಗೆ ಬಿಜೆಪಿ ಗಾಳ

Published : Mar 07, 2017, 11:38 AM ISTUpdated : Apr 11, 2018, 12:56 PM IST
ಎಸ್'ಎಂಕೆ ನಂತರ ಮತ್ತೊಬ್ಬ ಪ್ರಬಲ ನಾಯಕನಿಗೆ ಬಿಜೆಪಿ ಗಾಳ

ಸಾರಾಂಶ

ಸಚಿವ ಸ್ಥಾನ ಕಳೆದುಕೊಂಡ ನಂತರ ಮುಖ್ಯಮಂತ್ರಿ ವಿರುದ್ಧ ತಮ್ಮ ಅಸಮಾಧಾನ ಹೊರ ಹಾಕಿದ್ದರು. ನಂತರದ ದಿನಗಳಿಂದ ಪಕ್ಷದಲ್ಲಿ ಅಷ್ಟೊಂದು ಸಕ್ರಿಯರಾಗಿರಲಿಲ್ಲ.

ಬೆಂಗಳೂರು(ಮಾ.07): ನಿನ್ನೆಯಷ್ಟೆ ಎಸ್.ಎಂ. ಕೃಷ್ಣ ಅವರ ನಿವಾಸಕ್ಕೆ ಬಿಎಸ್'ವೈ ನೇತೃತ್ವದ ಬಿಜೆಪಿ ಮುಖಂಡರು ಭೇಟಿ ನೀಡಿ ಬಿಜೆಪಿಗೆ ಆಹ್ವಾನಿಸಿದ್ದರು. ಕೃಷ್ಣರವರು ಬಿಜೆಪಿಗೆ ಸೇರುವ ದಿನಾಂಕವನ್ನು ಖಚಿತಪಡಿಸದಿದ್ದರೂ ಸಕಾರಾತ್ಮಕವಾಗಿ ಪ್ರತಿಕ್ರಯಿಸಿ ಶೀಘ್ರದಲ್ಲಿಯೇ ಸೇರ್ಪಡೆಯ ಮುನ್ಸೂಚನೆ ನೀಡಿದ್ದರು.

ಈಗ ಸಚಿವ ಸ್ಥಾನ ಕಳೆದುಕೊಂಡಿರುವ ಮತ್ತೊಬ್ಬ ಮಂಡ್ಯದ ಮತ್ತೊಬ್ಬ ಒಕ್ಕಲಿಗ ಮುಖಂಡ ಹಾಗೂ ಸಿನಿಮಾ ನಟ ಅಂಬರೀಶ್'ಗೆ ಗಾಳ ಹಾಕಿದ್ದಾರೆ. ಇಂದು ಜೆಪಿ ನಗರದ ರೆಬಲ್'ಸ್ಟಾರ್ ನಿವಾಸಕ್ಕೆ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ಮುಖಂಡ ಆರ್. ಅಶೋಕ್ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ.ಭಾರತೀಯ ಜನತಾ ಪಾರ್ಟಿಗೆ ಆಹ್ವಾನಿಸುವ ನಿಟ್ಟಿನಲ್ಲಿ ಹಾಗೂ ಅವರ ಮುಂದಿನ ರಾಜಕೀಯ ನಿರ್ಧಾರಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.

ಅಂಬರೀಷ್ ಸಚಿವ ಸ್ಥಾನ ಕಳೆದುಕೊಂಡ ನಂತರ ಮುಖ್ಯಮಂತ್ರಿ ವಿರುದ್ಧ ತಮ್ಮ ಅಸಮಾಧಾನ ಹೊರ ಹಾಕಿದ್ದರು. ನಂತರದ ದಿನಗಳಿಂದ ಪಕ್ಷದಲ್ಲಿ ಅಷ್ಟೊಂದು ಸಕ್ರಿಯರಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಅಶೋಕ್ ಹಾಗೂ ಅಂಬರೀಶ್ ಭೇಟಿ ಹೆಚ್ಚು ಮಹತ್ವ ಪಡೆದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರೆಗ್ನೆಂಟ್ ಮಾಡಿ ಗರ್ಭಪಾತ ಮಾಡಿಸಿದ, Sorry ಅಮ್ಮಾ ಸಾಯ್ತಿದ್ದೀನಿ: ಯುವತಿ ಆತ್ಮ*ಹತ್ಯೆ
ಮದುವೆ ಮುರಿದುಬಿದ್ದ ಬಳಿಕ ಸ್ಮೃತಿ ಮಂಧಾನ-ಪಲಾಶ್ ಲೈಫ್‌ ಸ್ಟೈಲ್‌ನಲ್ಲಿ ಏನೆಲ್ಲಾ ಆಗೋಯ್ತು ನೋಡಿ...!