
ಬೆಂಗಳೂರು(ಅ.31): ಒಕ್ಕಲಿಗ ಮುಖಂಡರು ಶಾಸಕ ಮುನಿರತ್ನ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದು, ಈ ಪ್ರತಿಭಟನೆ ಬೇಡ ಎಂದು ಆರ್.ಅಶೋಕ್ ತಡೆ ಹಾಕಿದ್ದಾರೆ.
ಬಿಜೆಪಿ ಮಾಜಿ ಪಾಲಿಕೆ ಸದಸ್ಯ ರಾಮಚಂದ್ರಗೆ ಇಂದು ಅಶೋಕ್ ಕರೆ ಮಾಡಿ ಪ್ರತಿಭಟನೆ ಬೇಡ ಎಂದು ಸೂಚಿಸಿದ್ದಾರೆ ಎನ್ನಲಾಗಿದೆ. ಆದರೆ ಇದು ಸುಳ್ಳು, ಆರ್.ಅಶೋಕ್ ತಮಗೆ ಕರೆ ಮಾಡಿಲ್ಲ ಎಂದು ಮಾಜಿ ಕಾರ್ಪೊರೇಟರ್ ರಾಮಚಂದ್ರ ಸುವರ್ಣ ನ್ಯೂಸ್'ಗೆ ಹೇಳಿಕೆ ನೀಡಿದ್ದಾರೆ. 'ಇದು ಸಮುದಾಯದ ನಿರ್ಧಾರ. ಹಾಗಾಗಿ ಪ್ರತಿಭಟನೆ ಬಗ್ಗೆ ಮತ್ತೊಮ್ಮೆ ಸ್ವಾಮೀಜಿಗಳ ಜೊತೆ ಚರ್ಚಿಸುತ್ತೇವೆ' ಎಂದಿದ್ದಾರೆ.
ಇತ್ತೀಚಿನ ಕಾರ್ಯಕ್ರಮದಲ್ಲಿ ಶಾಸಕ ಮುನಿರತ್ನ ನಿರ್ಮಲಾನಂದ ಸ್ವಾಮಿಗಳ ಸಮ್ಮುಖದಲ್ಲಿ ‘ಶ್ರೀಗಳೇ ರಾಜ್ಯ ಆಳಲಿ’ ಎಂದಿದ್ದರು. ಈ ಹೇಳಿಕೆಯನ್ನು ಒಕ್ಕಲಿಗ ಮುಖಂಡರು ವಿರೋಧಿಸಿದಲ್ಲದೆ, ನಿನ್ನೆ ಸಭೆ ನಡೆಸಿದ ಒಕ್ಕಲಿಗ ಮುಖಂಡರು ಮುನಿರತ್ನ ವಿರುದ್ಧ ನವೆಂಬರ್ 2 ರಂದು ಪ್ರತಿಭಟನೆಗೆ ನಿರ್ಧರಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.