
ನವದೆಹಲಿ(ಮೇ.31): ರಫೆಲ್ ಒಪ್ಪಂದದಲ್ಲಿ ಹಗರಣ ನಡೆದಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಮುಜುಗರವಾಗುವ ಪ್ರಸಂಗವೊಂದು ನಡೆದಿದೆ. ಕಾಂಗ್ರೆಸ್ ಪಕ್ಷದ ಪ್ರಧಾನ ಕಚೇರಿ ಪಕ್ಕದಲ್ಲೇ ರಫೆಲ್ ಯುದ್ಧ ವಿಮಾನದ ಮಾದರಿಯೊಂದನ್ನು ನಿಲ್ಲಿಸಲಾಗಿದೆ.
ನವದೆಹಲಿಯಲ್ಲಿರುವ ವಾಯುಸೇನೆ ಮುಖ್ಯಸ್ಥರ ಅಧಿಕೃತ ನಿವಾಸದ ಎದುರು ರಫೆಲ್ ಯುದ್ಧ ವಿಮಾನದ ಮಾದರಿಯನ್ನು ನಿಲ್ಲಿಸಲಾಗಿದೆ. ಅಕ್ಬರ್ ರೋಡ್ನಲ್ಲಿರುವ ವಾಯುಸೇನೆ ಮುಖ್ಯಸ್ಥ ಬಿಎಸ್ ಧನೋವಾ ಅವರ ಅಧಿಕೃತ ನಿವಾಸದ ಪಕ್ಕದಲ್ಲೇ ಕಾಂಗ್ರೆಸ್ ಪಕ್ಷದ ಪ್ರಧಾನ ಕಚೇರಿ ಇದೆ.
ರಫೆಲ್ ಯುದ್ಧ ವಿಮಾನವನ್ನು ವಾಯುಸೇನೆಯ ಗೋಲ್ಡನ್ ಆ್ಯರೋಸ್ 17 ಸ್ಕ್ವಾರ್ಡನ್ಗೆ ಹಸ್ತಾಂತರಿಸಲಿದ್ದು, ಕಾರ್ಗಿಲ್ ಯುದ್ಧದ ಸಮುಯದಲ್ಲಿ ಈ ವಿಭಾಗವನ್ನು ಬಿಎಸ್ ಧನೋವಾ ಮುನ್ನಡೆಸಿದ್ದರು. ಈ ಕಾರಣಕ್ಕೆ ಧನೋವಾ ಅವರ ಅಧಿಕೃತ ನಿವಾಸದ ಮುಂದೆ ರಫೆಲ್ ಯುದ್ಧ ವಿಮಾನದ ಮಾದರಿಯನ್ನು ನಿಲ್ಲಿಸಲಾಗಿದೆ ಎನ್ನಲಾಗಿದೆ.
ಇದೇ ಸೆಪ್ಟೆಂಬರ್ನಲ್ಲಿ ರಫೆಲ್ ನ ಮೊದಲ ಹಂತದ ಯುದ್ಧ ವಿಮಾನಗಳನ್ನು ಫ್ರಾನ್ಸ್ ಭಾರತಕ್ಕೆ ಹಸ್ತಾಂತರಿಸಲಿದ್ದು, ಪರೀಕ್ಷಾರ್ಥ ಪ್ರಯೋಗ ಹಾರಾಟದ ಬಳಿಕ ಮೇ, 2020ರಲ್ಲಿ ವಾಯುಸೇನೆಗೆ ಅಧಿಕೃತವಾಗಿ ಸೇರ್ಪಡೆಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.
ರಫೆಲ್ ಒಪ್ಪಂದದಲ್ಲಿ ಹಗರಣ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೇ ಈ ಹಗರಣದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. ಅಲ್ಲದೇ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ‘ಚೌಕಿದಾರ್ ಚೋರ್ ಹೈ’ ಎಂಬ ಪದ ಬಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.