
ಬೆಂಗಳೂರು(ನ. 10): ಮಾಸ್ತಿಗುಡಿ ಶೂಟಿಂಗ್ ವೇಳೆ ದುರಂತ ಸಾವಿಗೀಡಾಗಿದ್ದ ರಾಘವ್ ಉದಯ್ ಇಂದು ಪಂಚಭೂತಗಳಲ್ಲಿ ಲೀನರಾದರು. ಬನಶಂಕರಿ ಬಳಿಯ ಹಿಂದೂ ರುದ್ರಭೂಮಿಯಲ್ಲಿ ಉದಯ್'ನ ಅಂತ್ಯಸಂಸ್ಕಾರ ನಡೆಯಿತು. ಉದಯ್'ನ ತಾತನ ಸಮಾಧಿಯನ್ನು ಅಗೆದು ಅದೇ ಸ್ಥಳದಲ್ಲಿ ಉದಯ್ ಶವ ಹೂಳಲಾಯಿತು.
ಇದಕ್ಕೂ ಮುನ್ನ, ಬನಶಂಕರಿ ಬಳಿಯ ಯಡಿಯೂರಿನಲ್ಲಿರುವ ಉದಯ್ ನಿವಾಸದಲ್ಲಿ ಸಾವಿರಾರು ಜನರು ಆಗಮಿಸಿ ಅಂತಿಮ ದರ್ಶನ ಪಡೆದರು. ಪುನೀತ್ ರಾಜಕುಮಾರ್, ಭಾರತಿ ವಿಷ್ಣುವರ್ಧನ್, ಶಿವರಾಂ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರೂ ಅಂತಿಮ ದರ್ಶನ ಪಡೆದರು. ಆರ್.ಅಶೋಕ್, ಸರವಣ ಮೊದಲಾದ ರಾಜಕೀಯ ಮುಖಂಡರೂ ಸ್ಥಳಕ್ಕೆ ಆಗಮಿಸಿ ಉದಯ್ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.