ರಾಘವೇಶ್ವರ ಶ್ರೀ ಕೇಸಿಂದ ಮತ್ತೊಬ್ಬ ಜಡ್ಜ್ ವಾಪಸ್

Published : Jan 13, 2018, 12:12 PM ISTUpdated : Apr 11, 2018, 12:35 PM IST
ರಾಘವೇಶ್ವರ ಶ್ರೀ ಕೇಸಿಂದ ಮತ್ತೊಬ್ಬ ಜಡ್ಜ್ ವಾಪಸ್

ಸಾರಾಂಶ

ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಶ್ರೀಗಳನ್ನು ಅತ್ಯಾಚಾರ ಆರೋಪದಿಂದ ಮುಕ್ತಗೊಳಿಸಿ ಬೆಂಗಳೂರು ನಗರ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ಆದೇಶ ರದ್ದು ಕೋರಿ ಸಲ್ಲಿಸಲಾಗಿದ್ದ ಕ್ರಿಮಿನಲ್ ಮೇಲ್ಮನವಿಯ ವಿಚಾರಣೆಯಿಂದ ನ್ಯಾಯ ಮೂರ್ತಿ ಕೆ.ಎನ್ .ಫಣೀಂದ್ರ ಶುಕ್ರವಾರ ಹಿಂದೆ ಸರಿದರು

ಬೆಂಗಳೂರು (ಜ.13): ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಶ್ರೀಗಳನ್ನು ಅತ್ಯಾಚಾರ ಆರೋಪದಿಂದ ಮುಕ್ತಗೊಳಿಸಿ ಬೆಂಗಳೂರು ನಗರ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ಆದೇಶ ರದ್ದು ಕೋರಿ ಸಲ್ಲಿಸಲಾಗಿದ್ದ ಕ್ರಿಮಿನಲ್ ಮೇಲ್ಮನವಿಯ ವಿಚಾರಣೆಯಿಂದ ನ್ಯಾಯ ಮೂರ್ತಿ ಕೆ.ಎನ್ .ಫಣೀಂದ್ರ ಶುಕ್ರವಾರ ಹಿಂದೆ ಸರಿದರು.

ರಾಮಕಥಾ ಗಾಯಕಿ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯ ಶುಕ್ರವಾರ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರಿದ್ದ ಏಕ ಸದಸ್ಯ ಪೀಠದ ಎದುರು ವಿಚಾರಣೆಗೆ ಬಂದಿತ್ತು. ಆದರೆ, ಈ ಹಿಂದೆ ಇದೇ ಪ್ರಕರಣಕ್ಕೆ ಸಂಬಂಧಿಸಿದ ಈ ಹಿಂದೆ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ವಿಚಾರಣೆ ವೇಳೆ ಪ್ರಕರಣದ ಸಂತ್ರಸ್ತೆ (ರಾಮಕಥಾ ಗಾಯಕಿ) ನನ್ನ ವಿರುದ್ಧ ಅವಿಶ್ವಾಸ ವ್ಯಕ್ತಪಡಿಸಿ ರಾಷ್ಟ್ರಪತಿಗಳು ಹಾಗೂ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದರು.

ಅದರಿಂದ ಆ ವಿಚಾರಣೆಯಿಂದ ನಾನು ಆಗ ಹಿಂದೆ ಸರಿದ್ದೆ. ಈ ಮೇಲ್ಮನವಿಯೂ ಅದೇ ಪ್ರಕರಣಕ್ಕೆ ಸಂಬಂಧಿಸಿದ ಕಾರಣ, ಮತ್ತೆ ನಾನು ಇದರ ವಿಚಾರಣೆ ನಡೆಸುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಕಸಿತ ಭಾರತದ ಸಂಕಲ್ಪಕ್ಕೆ ''ರಾಮ್ ಜಿ'' ಶಕ್ತಿ
ಚುನಾವಣೆಯಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿಗೆ ಧಕ್ಕೆ ಆಗದಿರಲಿ:ಎಚ್‌ಡಿಕೆ