
ಮಂಗಳೂರು: ಯುವ ಬ್ರಿಗೇಡ್ ಮುಖಂಡ ಚಕ್ರವರ್ತಿ ಸೂಲಿಬೆಲೆ ವಿರುದ್ಧ ನಿಂದನಾತ್ಮಕಾ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಸಚಿವ ರಮಾನಾಥ್ ರೈ ವಿರುದ್ಧ, ಬಿಜೆಪಿ ಅಲ್ಪಸಂಖ್ಯಾತ ವಿಭಾಗದ ಮುಖಂಡ ರಹೀಂ ಉಚ್ಚಿಲ್ ನ್ಯಾಯಾಲಯಕ್ಕೆ ದೂರು ನೀಡಿದ್ದಾರೆ.
ಸಾರ್ವಜನಿಕ ಸಭೆಯಲ್ಲಿ ಮಾತನಾಡುವ ವೇಳೆ ರಮಾನಾಥ ರೈ ಸೂಲಿಬೆಲೆಯವರನ್ನು ‘ಚಕ್ರವರ್ತಿ ಸೂಳೆ’ ‘ದೇಶದ್ರೋಹಿ’ ಎಂಬ ಕೀಳು ಮಟ್ಟದ ಶಬ್ದಗಳನ್ನು ಬಳಸಿ ಅವಮಾನಿಸಿದ್ದಾರೆ ಎಂದು ರಹೀಂ ಉಚ್ಚಿಲ್ ದೂರಿನಲ್ಲಿ ಹೇಳಿದ್ದಾರೆ.
ಕಳೆದ ಸೆ.22ರಂದು ದಕ್ಷಿಣ ಕನ್ನಡ ಜಿಲ್ಲೆಯ ಅಸೈಗೋಳದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ತುಳು ಭಾಷೆಯಲ್ಲಿ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಸಚಿವರು, ಸೂಲಿಬೆಲೆ ಬಗ್ಗೆ ವ್ಯಂಗ್ಯವಾಡಿದ್ದರು. ಆ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಚಿವರು ಈ ರೀತಿಯ ಪದ ಬಳಕೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.